ಪಹಲ್ಗಾಮ್ ಉಗ್ರರ ದಾಳಿ: ಸಂಸತ್ ವಿಶೇಷ ಅಧಿವೇಶನಕ್ಕೆ ಕಾಂಗ್ರೆಸ್ ಆಗ್ರಹ, ಪ್ರಧಾನಿ ಮೋದಿಗೆ ಪತ್ರ

ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ದಾಳಿಗೆ ಪ್ರತಿಕ್ರಿಯೆಯಾಗಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಸಾವನ್ನಪ್ಪಿದ ಘಟನೆ ಕುರಿತು ಚರ್ಚಿಸಲು ವಿಶೇಷ ಸಂಸತ್ತಿನ ಅಧಿವೇಶನ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ.

ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ದಾಳಿಗೆ ಪ್ರತಿಕ್ರಿಯೆಯಾಗಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ಅಧಿವೇಶನವು ದಾಳಿಯ ಬಗ್ಗೆ ಜಂಟಿ ನಿಲುವನ್ನು ವ್ಯಕ್ತಪಡಿಸಲು ಮತ್ತು ಪರಿಸ್ಥಿತಿ ನಿಭಾಯಿಸಲು ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ವೇದಿಕೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಮಯದಲ್ಲಿ ಒಗ್ಗಟ್ಟು ಮತ್ತು ಏಕತೆಯ ಅಗತ್ಯವಿದೆ. ಹೀಗಾಗಿ ಸರ್ಕಾರ ಎರಡೂ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯಬೇಕು ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
ಶಶಿ ತರೂರ್ ಕಾಂಗ್ರೆಸ್ ಜೊತೆಗಿದ್ದಾರೆಯೇ ಅಥವಾ ಬಿಜೆಪಿಗೆ 'ಕೈ' ಜೋಡಿಸಿದ್ದಾರೆಯೇ?: ಪಹಲ್ಗಾಮ್ ಹೇಳಿಕೆಗೆ ಕಿಡಿ; Video

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಏಪ್ರಿಲ್ 22 ರಂದು ವಿಶೇಷ ಅಧಿವೇಶನ ನಡೆಸಿದ್ದು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ. ಅಧಿವೇಶನದಲ್ಲಿ ಒಗ್ಗಟ್ಟು ಮತ್ತು ಏಕತೆಯನ್ನು ಪ್ರದರ್ಶಿಸಲಾಗಿದ್ದು, ನಿರ್ಣಯವನ್ನು ಅಂಗೀಕರಿಸಿದೆ.

ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಅಧಿವೇಶನದ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸುವ ನಿರ್ಣಯವನ್ನು ಮಂಡಿಸಿದರು, ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರ ಆರಂಭಿಕ ಹೇಳಿಕೆಗಳ ನಂತರ. ಕೇಂದ್ರ ಸರ್ಕಾರ ಘೋಷಿಸಿದ ರಾಜತಾಂತ್ರಿಕ ಕ್ರಮಗಳನ್ನು ನಿರ್ಣಯವನ್ನು ಅನುಮೋದಿಸಲಾಯಿತು.

ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ನಿರ್ಣಯವನ್ನು ಅಂಗೀಕರಿಸಲಾಯಿತು, ನಂತರ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com