
ನವದೆಹಲಿ: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಹಾಲಿ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನಿವೃತ್ತಿಯಾದ ಒಂದು ದಿನದ ನಂತರ, ಅಂದರೆ ಮೇ 14 ರಂದು ದೇಶದ 52ನೇ ಸಿಜೆಐ ಆಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಏಪ್ರಿಲ್ 16 ರಂದು ಭಾರತದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ(CJI) ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದ್ದರು.
ನ್ಯಾಯಮೂರ್ತಿ ಗವಾಯಿ ಅವರಿಗೆ ಆರು ತಿಂಗಳ ಅಧಿಕಾರಾವಧಿ ಇದ್ದು, ಡಿಸೆಂಬರ್ 23 ರಂದು 65 ವರ್ಷ ವಯಸ್ಸಾದ ನಂತರ ನಿವೃತ್ತಿಯಾಗಲಿದ್ದಾರೆ.
ಸಿಜೆಐ ಖನ್ನಾ ನಂತರ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಅವರನ್ನು ಮುಂದಿನ ಸಿಜೆಐ ಹುದ್ದೆಗೆ ಶಿಫಾರಸು ಮಾಡಲಾಗಿತ್ತು.
Advertisement