
ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಷ್ಯಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.
ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧ ಸೋವಿಯತ್ ವಿಜಯದ 80ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ವಿಜಯ ದಿವಸ್ ಪರೇಡ್ ನಲ್ಲಿ ಅತಿಥಿಯಾಗಿ ಭಾಗವಹಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು.
ಆದರೆ ಮೋದಿ ರಷ್ಯಾ ಪ್ರವಾಸ ರದ್ದುಗೊಳಿಸಿದ್ದು, ಮೇ 9 ರಂದು ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಮೇ 9 ರಂದು ಮಾಸ್ಕೋದಲ್ಲಿ ನಡೆಯಲಿರುವ ಪರೇಡ್ ನಲ್ಲಿ ಭಾಗವಹಿಸಲು ಮೋದಿ ರಷ್ಯಾಗೆ ತೆರಳಬೇಕಿತ್ತು ಆದರೆ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ ಮೋದಿ ರಷ್ಯಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.
Advertisement