ಜಾರ್ಖಂಡ್‌ನಲ್ಲಿ ಸಿಡಿಲು ಬಡಿದು ಏಳು ಮಂದಿ ಸಾವು

ಪಲಮು ಜಿಲ್ಲೆಯಲ್ಲಿ ನಾಲ್ವರು, ಖುಂಟಿಯಲ್ಲಿ ಇಬ್ಬರು ಮತ್ತು ಚೈಬಾಸಾದಲ್ಲಿ ಒಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
Lightning strikes kill 7
ಸಾಂದರ್ಭಿಕ ಚಿತ್ರ
Updated on

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ 24 ಗಂಟೆಯಲ್ಲಿ ಹವಾಮಾನ ವೈಪರೀತ್ಯದಿಂದ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ.

ಪಲಮು ಜಿಲ್ಲೆಯಲ್ಲಿ ನಾಲ್ವರು, ಖುಂಟಿಯಲ್ಲಿ ಇಬ್ಬರು ಮತ್ತು ಚೈಬಾಸಾದಲ್ಲಿ ಒಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಪಲಮು ಜಿಲ್ಲೆಯಲ್ಲಿ ಅತ್ಯಂತ ವಿನಾಶಕಾರಿ ಘಟನೆ ಸಂಭವಿಸಿದ್ದು, ಹೊಲಗಳಲ್ಲಿ ಭತ್ತ ನಾಟಿ ಮಾಡುವಾಗ ಒಂದೇ ಕುಟುಂಬದ ಮೂವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

Lightning strikes kill 7
ಜಾರ್ಖಂಡ್‌: ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿತ; ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ

ಖುಂಟಿ ಜಿಲ್ಲೆಯ ಟೋರ್ಪಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇನ್ನೂ ಮೂವರು ಸಾವನ್ನಪ್ಪಿದ್ದಾರೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮತ್ತೊಂದು ಸಾವು ದೃಢಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ ಏಳಕ್ಕೆ ತಲುಪಿದೆ.

ಹವಾಮಾನ ಇಲಾಖೆಯ ಪ್ರಕಾರ, ಗರ್ವಾ, ಪಲಮು ಮತ್ತು ಛತ್ರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com