PM Modi ಅಧ್ಯಕ್ಷತೆಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳ ಕುರಿತು ಉನ್ನತ ಮಟ್ಟದ ಸಭೆ

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್ ಮತ್ತು ಲಲನ್ ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದರು.
narendra modi
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆANI
Updated on

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಕೇಂದ್ರದ ಉನ್ನತ ಸಚಿವರು, ಕಾರ್ಯದರ್ಶಿಗಳು ಮತ್ತು ಅರ್ಥಶಾಸ್ತ್ರಜ್ಞರು ಭಾಗವಹಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅವರು ಮಾಡಿದ ಪ್ರಮುಖ ಘೋಷಣೆಗಳಲ್ಲಿ ಒಂದಾದ ಮುಂದಿನ ಪೀಳಿಗೆಯ ಸುಧಾರಣೆಗಳ ಮಾರ್ಗಸೂಚಿಯ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್ ಮತ್ತು ಲಲನ್ ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದರು. ವಿವಿಧ ಸಚಿವಾಲಯಗಳ ಮುಖ್ಯಸ್ಥರಾಗಿರುವ ಹಿರಿಯ ಅಧಿಕಾರಿಗಳು ಮತ್ತು ಅರ್ಥಶಾಸ್ತ್ರಜ್ಞರು ಭಾಗವಹಿಸಿದ್ದರು.

"ಮುಂದಿನ ಪೀಳಿಗೆಯ ಸುಧಾರಣೆಗಳ ಮಾರ್ಗಸೂಚಿಯ ಕುರಿತು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿದೆ. ಜೀವನ ಸುಲಭತೆ, ವ್ಯಾಪಾರ ಮಾಡುವ ಸುಲಭತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವ ಎಲ್ಲಾ ವಲಯಗಳಲ್ಲಿ ತ್ವರಿತ ಸುಧಾರಣೆಗಳಿಗೆ ನಾವು ಬದ್ಧರಾಗಿದ್ದೇವೆ" ಎಂದು ಮೋದಿ X ನಲ್ಲಿ ಹೇಳಿದ್ದಾರೆ.

narendra modi
ಪ್ರಸ್ತಾವಿತ ಜಿಎಸ್‌ಟಿ ಪರಿಷ್ಕರಣೆಗಳನ್ನು ಜಾರಿಗೆ ತರಲು ಸಹಕರಿಸಿ; ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ

ಆಗಸ್ಟ್ 15 ರಂದು ಮ್ಮ 103 ನಿಮಿಷಗಳ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ 'ಮುಂದಿನ ಪೀಳಿಗೆಯ ಸುಧಾರಣೆಗಳು' ಮತ್ತು ಜಿಎಸ್ಟಿ ಕಾನೂನುಗಳ ಪರಿಷ್ಕರಣೆಗಾಗಿ ಕಾರ್ಯಪಡೆ ರಚನೆಯನ್ನು ಘೋಷಿಸಿದ ಅವರು, ಸೆಮಿಕಂಡಕ್ಟರ್‌ಗಳಿಂದ ರಸಗೊಬ್ಬರಗಳವರೆಗೆ ಹಲವಾರು ಕ್ಷೇತ್ರಗಳಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಗುರಿಯನ್ನು ವಿವರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com