Chhattisgarh: ನಕ್ಸಲರ ಅಟ್ಟಹಾಸ; IED ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ.
file photo
ಸಂಗ್ರಹ ಚಿತ್ರ
Updated on

ಛತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ಪರಿಣಾಮ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಯೋಧರೊಬ್ಬರು ಹುತಾತ್ಮರಾಗಿ, ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಭಾನುವಾರದಿಂದ ಕಾರ್ಯಾಚರಣೆ ಆರಂಭವಾಗಿತ್ತು, ಇಂದು ಬೆಳಗ್ಗೆ ಕೂಡ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಐಇಡಿ ಸ್ಫೋಟ ಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹುತಾತ್ಮ ಯೋಧನನ್ನು ದಿನೇಶ್ ನಾಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಸಿಬ್ಬಂದಿಗೆ ಸ್ಥಳದಲ್ಲಿ ತಕ್ಷಣದ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಅವರನ್ನು ದಟ್ಟ ಅರಣ್ಯ ಪ್ರದೇಶದಿಂದ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

file photo
ಛತ್ತೀಸ್ಗಢ: ಐಇಡಿ ಸ್ಫೋಟ, ಸಿಆರ್"ಪಿಎಫ್ ಯೋಧನಿಗೆ ಗಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com