Vice-President Poll: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.
B Sudarshan Reddy filing nomination
ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
Updated on

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಬಣದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಇಂದು ಗುರುವಾರ ನಾಮಪತ್ರ ಸಲ್ಲಿಸಿದರು.

ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ. ವಿರೋಧ ಪಕ್ಷದ ಮೈತ್ರಿಕೂಟದ ಸಭೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯಮೂರ್ತಿ ರೆಡ್ಡಿ ಅವರ ಉಮೇದುವಾರಿಕೆಯನ್ನು ಘೋಷಿಸಿದ್ದರು.

ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಭಾರತೀಯ ನ್ಯಾಯಶಾಸ್ತ್ರದಲ್ಲಿ "ಅತ್ಯುನ್ನತ ವ್ಯಕ್ತಿ" ಎಂದು ಪರಿಗಣಿಸಲಾಗಿದೆ, ಅವರ ವೃತ್ತಿಜೀವನದಲ್ಲಿ ಹೆಗ್ಗುರುತು ತೀರ್ಪುಗಳು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಅವರು ತೋರಿಸಿದ್ದ ದೃಢ ಸಮರ್ಪಣೆಗಾಗಿ ಅವರನ್ನು ಗೌರವಿಸಲಾಗಿದೆ.

B Sudarshan Reddy filing nomination
Vice President Polls: ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com