ಬಿಹಾರ SIR: ಮತದಾರರಿಗೆ ಆಧಾರ್ ಸೇರಿ 11 ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಆಧಾರ್ ಕಾರ್ಡ್ ಅಥವಾ SIR ಅಡಿಯಲ್ಲಿ ಈಗಾಗಲೇ ಅಂಗೀಕರಿಸಲ್ಪಟ್ಟ 11 ದಾಖಲೆಗಳಲ್ಲಿ ಯಾವುದಾದರೂ ಒಂದರೊಂದಿಗೆ ಮತದಾರರು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ.
Supreme Court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ಮತದಾರರು ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆಯ ಭಾಗವಾಗಿ ಭೌತಿಕ ಅರ್ಜಿ ಸಲ್ಲಿಕೆ ಜೊತೆಗೆ ಆನ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಚುನಾವಣಾ ಆಯೋಗಕ್ಕೆ(ECI) ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಆಧಾರ್ ಕಾರ್ಡ್ ಅಥವಾ SIR ಅಡಿಯಲ್ಲಿ ಈಗಾಗಲೇ ಅಂಗೀಕರಿಸಲ್ಪಟ್ಟ 11 ದಾಖಲೆಗಳಲ್ಲಿ ಯಾವುದಾದರೂ ಒಂದರೊಂದಿಗೆ ಮತದಾರರು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ.

ಈ ಪ್ರಕ್ರಿಯೆ "ಮತದಾರ ಸ್ನೇಹಿ" ಆಗಿರಬೇಕು ಮತ್ತು ಆಧಾರ್ ವ್ಯಾಪಕವಾಗಿರುವುದರಿಂದ ಪ್ರಕ್ರಿಯೆಯನ್ನು ಸುಲಭಗೊಳಿಸಲು ಅದನ್ನು ಸ್ವೀಕರಿಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

ಮತದಾರರ ಪಟ್ಟಿಯಿಂದ ಹೊರಗುಳಿದಿರುವ 65 ಲಕ್ಷಕ್ಕೂ ಹೆಚ್ಚು ಮತದಾರರಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸಲು ನಾಗರಿಕರಿಗೆ ಸಹಾಯ ಮಾಡುವಲ್ಲಿ ರಾಜಕೀಯ ಪಕ್ಷಗಳ ನಿಷ್ಕ್ರಿಯತೆಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿಚಾರಣೆಯಲ್ಲಿ ಅವರನ್ನು ಒಳಗೊಳ್ಳುವಂತೆ ಬಿಹಾರ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶಿಸಿದೆ.

Supreme Court
Bihar SIR: ಕೈ ಬಿಟ್ಟ 65 ಲಕ್ಷ ಮತದಾರರ ಪಟ್ಟಿ ಬಿಡುಗಡೆ ಮಾಡಿದ Election Commission

"ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ವಿಚಾರಣೆಯ ದಿನಾಂಕದೊಳಗೆ ಹಕ್ಕುಪತ್ರಗಳ ಸ್ಥಿತಿಗತಿ ವರದಿಯನ್ನು ಸಲ್ಲಿಸಬೇಕು" ಎಂದು ಹೇಳಿ, ಸೆಪ್ಟೆಂಬರ್ 8ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮತದಾರರ ಪರವಾಗಿ ಭೌತಿಕವಾಗಿ ಹಕ್ಕುಪತ್ರಗಳನ್ನು ಸಲ್ಲಿಸುವ ಬೂತ್ ಮಟ್ಟದ ಏಜೆಂಟ್‌ಗಳಿಗೆ(ಬಿಎಲ್‌ಎ) ಸ್ವೀಕೃತಿ ರಶೀದಿಗಳನ್ನು ಒದಗಿಸುವಂತೆ ಚುನಾವಣಾ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಚುನಾವಣಾ ಸಮಿತಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಯಾವುದೇ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿಲ್ಲ ಎಂದು ತೋರಿಸಲು ಚುನಾವಣಾ ಆಯೋಗಕ್ಕೆ 15 ದಿನಗಳ ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

"ರಾಜಕೀಯ ಪಕ್ಷಗಳು ಗದ್ದಲ ಮಾಡುತ್ತಿವೆ ಮತ್ತು ವಿಷಯಗಳು ಕೆಟ್ಟದ್ದಲ್ಲ. ನಮ್ಮ ಮೇಲೆ ನಂಬಿಕೆ ಇರಿಸಿ ಮತ್ತು ನಮಗೆ ಸ್ವಲ್ಪ ಸಮಯ ನೀಡಿ. ಯಾವುದೇ ಹೊರಗಿಡುವಿಕೆಗಳಿಲ್ಲ ಎಂದು ನಾವು ತೋರಿಸಲು ಸಾಧ್ಯವಾಗುತ್ತದೆ" ಎಂದು ಅವರು ಹೇಳಿದರು.

Supreme Court
ಆಧಾರ್‌ನೊಂದಿಗೆ ಅರ್ಜಿ ಸಲ್ಲಿಸಿ: ಕರಡು ಪಟ್ಟಿಯಿಂದ ಕೈಬಿಟ್ಟ ಮತದಾರರಿಗೆ ಬಿಹಾರ ಸಿಇಒ ಸೂಚನೆ

ಬಿಹಾರದಲ್ಲಿ 1.68 ಲಕ್ಷಕ್ಕೂ ಹೆಚ್ಚು ಬಿಎಲ್‌ಎಗಳನ್ನು ಹೊಂದಿದ್ದರೂ ಮತದಾರರಿಗೆ ಸಹಾಯ ಮಾಡಲು ವಿಫಲವಾದ ರಾಜಕೀಯ ಪಕ್ಷಗಳನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದೆ.

"ಬಿಎಲ್‌ಎಗಳನ್ನು ನೇಮಿಸಿದ ನಂತರ, ಅವರು ಏನು ಮಾಡುತ್ತಿದ್ದಾರೆ? ಜನರು ಮತ್ತು ಸ್ಥಳೀಯ ರಾಜಕೀಯ ವ್ಯಕ್ತಿಗಳ ನಡುವೆ ಅಂತರ ಏಕೆ? ರಾಜಕೀಯ ಪಕ್ಷಗಳು ಮತದಾರರಿಗೆ ಸಹಾಯ ಮಾಡಬೇಕು" ಎಂದು ಪೀಠ ಅಭಿಪ್ರಾಯಪಟ್ಟಿದೆ.

ಆಧಾರ್ ಅಥವಾ 11 ದಾಖಲೆಗಳಲ್ಲಿ ಯಾವುದನ್ನಾದರೂ ಬಳಸಿಕೊಂಡು ನಾಗರಿಕರು ಅರ್ಜಿ ಸಲ್ಲಿಸಲು ಸಹಾಯ ಮಾಡುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಬೇಕು ಎಂದು ಸುಪ್ರೀಂ ಕೋರ್ಟ್ 12 ಪ್ರಮುಖ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿದೆ. ಹೊರಗಿಡಲಾದ ಮತದಾರರು ನಿಜವಾಗಿಯೂ ನಿಧನರಾಗಿದ್ದಾರೆಯೇ ಅಥವಾ ಸ್ವಯಂಪ್ರೇರಣೆಯಿಂದ ನಿವಾಸವನ್ನು ಬದಲಾಯಿಸಿದ್ದಾರೆಯೇ ಎಂದು ಬಿಎಲ್‌ಎಗಳು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Supreme Court
ಚುನಾವಣಾ ಆಯೋಗ ಮುಕ್ತ ಮನಸ್ಸಿನಿಂದ ಇರಲಿ... (ನೇರ ನೋಟ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com