Vice President polls: NDA ಅಭ್ಯರ್ಥಿಯನ್ನು ಬೆಂಬಲಿಸಲು ಶರದ್ ಪವಾರ್ ಗೆ ಫಡ್ನವಿಸ್ ಮನವಿ; NCP ನಾಯಕನ ಪ್ರತಿಕ್ರಿಯೆ ಏನು?

ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.
Devendra Fadnavis- Sharad pawar
ದೇವೇಂದ್ರ ಫಡ್ನವಿಸ್-ಶರದ್ ಪವಾರ್online desk
Updated on

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಬೆಂಬಲ ನೀಡುವಂತೆ ಎನ್ ಸಿ ಪಿ ನಾಯಕ ಶರದ್ ಪವಾರ್ ಗೆ ಕರೆ ಮಾಡಿದ್ದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎಗಿಂತ ನಮಗೆ ಕಡಿಮೆ ಸಂಖ್ಯಾಬಲವಿದ್ದರೂ, ನಮಗೆ ಯಾವುದೇ ಚಿಂತೆ ಇಲ್ಲ, ಆದರೆ ಎನ್ ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷ ಸರ್ವಾನುಮತದಿಂದ ರೆಡ್ಡಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪವಾರ್ ಹೇಳಿದರು. ವಿರೋಧ ಪಕ್ಷದ ಎಲ್ಲಾ ಮತಗಳು ರೆಡ್ಡಿಗೆ ಹೋಗುತ್ತವೆ. ಇಂಡಿ ಮೈತ್ರಿಕೂಟ ತನ್ನ ಬಲವನ್ನು ತಿಳಿದಿದೆ. ನಾವು ಯಾವುದೇ ಆಶ್ಚರ್ಯಗಳನ್ನು ನಿರೀಕ್ಷಿಸುತ್ತಿಲ್ಲ ಎಂದು ಅವರು ಹೇಳಿದರು. ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ (ಉಪರಾಷ್ಟ್ರಪತಿ ಹುದ್ದೆ) ಗೆ ಚುನಾವಣೆ ಸೆಪ್ಟೆಂಬರ್ 9 ರಂದು ನಡೆಯಲಿದೆ.

Devendra Fadnavis- Sharad pawar
ಮುಂಬೈ: RSS ಕಾರ್ಯಕ್ರಮದಲ್ಲಿ ಭಾಗಿ; ಅಜಿತ್ ಪವಾರ್ ಪತ್ನಿ ವಿವಾದಕ್ಕೆ ಗುರಿ!

"ಎನ್‌ಡಿಎ ಅಭ್ಯರ್ಥಿ ನಮ್ಮ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ಅವರು ಜಾರ್ಖಂಡ್ ರಾಜ್ಯಪಾಲರಾಗಿದ್ದಾಗ, ಸಿಎಂ ಹೇಮಂತ್ ಸೊರೆನ್ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಸೊರೆನ್ ರಾಜ್ಯಪಾಲರನ್ನು ಭೇಟಿ ಮಾಡಲು ಹೋದಾಗ ಅವರನ್ನು ರಾಜಭವನದಲ್ಲಿ ಬಂಧಿಸಲಾಯಿತು. ಇದು ಅಧಿಕಾರದ ದುರುಪಯೋಗದ ಸ್ಪಷ್ಟ ಉದಾಹರಣೆಯಾಗಿದೆ ಮತ್ತು ಅಂತಹ ಅಭ್ಯರ್ಥಿಗೆ ಬೆಂಬಲವನ್ನು ನಿರೀಕ್ಷಿಸುವುದು ಸೂಕ್ತವಲ್ಲ. ಆದ್ದರಿಂದ, ಮುಖ್ಯಮಂತ್ರಿಯ ಕೋರಿಕೆಯನ್ನು ಸ್ವೀಕರಿಸಲು ನನ್ನ ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದೇನೆ" ಎಂದು ಪವಾರ್ ಹೇಳಿದ್ದಾರೆ.

ಫಡ್ನವೀಸ್ ಗುರುವಾರ ರಾಧಾಕೃಷ್ಣನ್‌ಗೆ ಪವಾರ್ ಮತ್ತು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಬೆಂಬಲವನ್ನು ಕೋರಿದರು. ಫಡ್ನವೀಸ್ ಜೊತೆಗೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಠಾಕ್ರೆ ಅವರಿಗೆ ಕರೆ ಮಾಡಿ, ಎನ್‌ಡಿಎ ಆಯ್ಕೆಗೆ ಬೆಂಬಲ ನೀಡುವಂತೆ ಒತ್ತಾಯಿಸಿದರು ಎಂದು ಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಭಾಗವಾಗಿದೆ. ಈ ಮೂರು ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷದ ಇಂಡೀ ಬಣದ ಮಿತ್ರಪಕ್ಷಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com