ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ನಕ್ಸಲರಿಂದ ಶಿಕ್ಷಕನ ಹತ್ಯೆ

ನಕ್ಸಲರು ಶಿಕ್ಷಕನನ್ನು ಹರಿತವಾದ ಆಯುಧಗಳಿಂದ ಕೊಂದು ಗ್ರಾಮದ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.
Naxals kill teacher on suspicion of being police informer
ಸಾಂದರ್ಭಿಕ ಚಿತ್ರ
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 'ಶಿಕ್ಷಾದೂತ'(ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವ ತಾತ್ಕಾಲಿಕ ಶಿಕ್ಷಕ) ಆಗಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸ್ ಮಾಹಿತಿದಾರನೆಂದು ಶಂಕಿಸಿ, ನಕ್ಸಲರು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಟೋಡ್ಕಾ ಗ್ರಾಮದ ನಿವಾಸಿ ಕಲ್ಲು ತಾಟಿ ಎಂಬ ಶಿಕ್ಷಕ, ಶುಕ್ರವಾರ ಸಂಜೆ ಹತ್ತಿರದ ಲೆಂದ್ರ ಗ್ರಾಮದ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಕ್ಸಲರು ಅವರನ್ನು ಅಪಹರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಕ್ಸಲರು ಶಿಕ್ಷಕನನ್ನು ಹರಿತವಾದ ಆಯುಧಗಳಿಂದ ಕೊಂದು ಗ್ರಾಮದ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಭದ್ರತಾ ಪಡೆಗಳ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Naxals kill teacher on suspicion of being police informer
ಛತ್ತೀಸ್‌ಗಢ: ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಬಸ್ತಾರ್ ಪ್ರದೇಶದಲ್ಲಿ ಶಿಕ್ಷಾದೂತರನ್ನು ಗುರಿಯಾಗಿಸಿಕೊಂಡು ನಕ್ಸಲರು ದಾಳಿ ನಡೆಸುತ್ತಿದ್ದಾರೆ. ಅವರು ಪೊಲೀಸ್ ಮಾಹಿತಿದಾರರು ಎಂದು ಶಂಕಿಸಲಾಗಿದೆ ಮತ್ತು ಜೂನ್ 2023 ರಿಂದ ಬುಡಕಟ್ಟು ಪ್ರಾಬಲ್ಯದ ಬಸ್ತಾರ್ ಪ್ರದೇಶದಲ್ಲಿ ನಡೆದ ಎಂಟನೇ ಕೊಲೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಈ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಯುವ ಶಿಕ್ಷಕರ ಹತ್ಯೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸಮಾಜವನ್ನು ಉನ್ನತೀಕರಿಸಲು ಕೆಲಸ ಮಾಡುವವರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ನಡೆಸುತ್ತಿರುವ ಇಂತಹ ಹೇಯ ಕೃತ್ಯಗಳನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ" ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com