

ನವದೆಹಲಿ: ಇಂಡಿಗೋ ವಿಮಾನದ “ವೈಫಲ್ಯ”ಕ್ಕೆ ಮೋದಿ ಸರ್ಕಾರದ “ಏಕಸ್ವಾಮ್ಯ ಮಾದರಿ”ಯೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತವು ಮ್ಯಾಚ್ ಫಿಕ್ಸಿಂಗ್ ಏಕಸ್ವಾಮ್ಯಗಳಲ್ಲ, ಬದಲಾಗಿ ಪ್ರತಿಯೊಂದು ವಲಯದಲ್ಲೂ ನ್ಯಾಯಯುತ ಸ್ಪರ್ಧೆಗೆ ಅರ್ಹವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಗುರುವಾರ ಇಂಡಿಗೊ 550 ಕ್ಕೂ ಹೆಚ್ಚು ವಿಮಾನಗಳು ಮತ್ತು ಶುಕ್ರವಾರ 400 ವಿಮಾನಗಳನ್ನು ರದ್ದುಗೊಳಿಸಿ ನೂರಾರು ಪ್ರಯಾಣಿಕರ ಪ್ರಯಾಣ ಯೋಜನೆಗಳನ್ನು ಅಸ್ತವ್ಯಸ್ತಗೊಳಿಸಿದ ಹಿನ್ನೆಲೆಯಲ್ಲಿ, ವಿಳಂಬ, ರದ್ದತಿ ಮತ್ತು ಅಸಹಾಯಕತೆಗೆ ಸಾಮಾನ್ಯ ಭಾರತೀಯರು ಬೆಲೆ ತೆರಬೇಕಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
“ಇಂಡಿಗೋ ವೈಫಲ್ಯವು ಸರ್ಕಾರದ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ. ಮತ್ತೊಮ್ಮೆ, ವಿಳಂಬ, ರದ್ದತಿ ಮತ್ತು ಅಸಹಾಯಕತೆಯಿಂದ ಸಾಮಾನ್ಯ ಭಾರತೀಯರು ಬೆಲೆ ತೆರುತ್ತಿದ್ದಾರೆಂದು ತಿಳಿಸಿದ್ದಾರೆ.
Advertisement