ಪಶ್ಚಿಮ ಬಂಗಾಳ: ಅಮಾನತುಗೊಂಡ TMC ಶಾಸಕನಿಂದ 'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!

"ಕೋಮು ರಾಜಕೀಯ"ದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಟಿಎಂಸಿ ಈ ವಾರದ ಆರಂಭದಲ್ಲಿ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
Suspended TMC MLA lays foundation stone for 'Babri-style' mosque in WB
'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!
Updated on

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ, ಶನಿವಾರ ಬಿಗಿ ಭದ್ರತೆಯ ನಡುವೆ, ಅಯೋಧ್ಯೆಯ ಬಾಬರಿ ಮಸೀದಿ ಮಾದರಿಯಲ್ಲಿ ಮಸೀದಿ ನಿರ್ಮಾಣಕ್ಕೆ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಇಂದು ಬೆಳಗ್ಗೆಯಿಂದ ಸಾವಿರಾರು ಜನ ಸೇರಿದ್ದ ಸ್ಥಳದಲ್ಲಿ "ನಾರಾ-ಎ-ತಕ್ಬೀರ್, ಅಲ್ಲಾಹು ಅಕ್ಬರ್" ಎಂಬ ಘೋಷಣೆಗಳು ಮೊಳಗುತ್ತಿದ್ದಂತೆ, ಕಬೀರ್ ಅವರು ವೇದಿಕೆಯ ಮೇಲೆ ಧರ್ಮಗುರುಗಳ ಜೊತೆಗೆ ವಿಧ್ಯುಕ್ತವಾಗಿ ರಿಬ್ಬನ್ ಕತ್ತರಿಸುವ ಮೂಲಕ 'ಬಾಬ್ರಿ ಮಸೀದಿ'ಗೆ ಅಡಿಪಾಯ ಹಾಕಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೆಜಿನಗರ ಮತ್ತು ಪಕ್ಕದ ಬೆಲ್ಡಂಗಾ ಪ್ರದೇಶದಾದ್ಯಂತ ಪೊಲೀಸ್, ಆರ್‌ಎಎಫ್ ಮತ್ತು ಕೇಂದ್ರ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿತ್ತು.

Suspended TMC MLA lays foundation stone for 'Babri-style' mosque in WB
ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್; TMC ಶಾಸಕ ಹುಮಾಯೂನ್ ಕಬೀರ್ ಅಮಾನತು; ಹೊಸ ಪಕ್ಷ ರಚನೆಯ ಘೋಷಣೆ!

"ಕೋಮು ರಾಜಕೀಯ"ದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಟಿಎಂಸಿ ಈ ವಾರದ ಆರಂಭದಲ್ಲಿ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಈ ತಿಂಗಳ ಆರಂಭದಲ್ಲಿ ಕಬೀರ್ ಅವರು ಶಂಕುಸ್ಥಾಪನೆ ಸಮಾರಂಭವನ್ನು ಘೋಷಿಸಿದ್ದರು. ಇದು ರಾಜಕೀಯ ಟೀಕೆಗೆ ಕಾರಣವಾಯಿತು ಮತ್ತು ರಾಜ್ಯ ಸರ್ಕಾರ ಭದ್ರತೆಯನ್ನು ಹೆಚ್ಚಿಸಲು ಪ್ರೇರೇಪಿಸಿತು.

ಶಂಕುಸ್ಥಾಪನೆ ಸಮಾರಂಭಕ್ಕಾಗಿ, ಕಬೀರ್ ಅವರು ಡಿಸೆಂಬರ್ 6 ಅನ್ನು ಆಯ್ಕೆ ಮಾಡಿಕೊಂಡರು. ಏಕೆಂದರೆ ಇದು ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com