ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್

ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್ ಅವರು ಇಂದು ಬಿಜೆಪಿ ಮುಂಬೈ ಘಟಕದ ಮುಖ್ಯಸ್ಥ ಅಮೀತ್ ಸತಮ್ ಮತ್ತು ಎಂಎಲ್ ಸಿ ಪ್ರವೀಣ್ ದಾರೇಕರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Setback for Uddhav as Tejasvi Ghosalkar joins BJP
ತೇಜಸ್ವಿ ಘೋಸಲ್ಕರ್
Updated on

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.

ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್ ಅವರು ಇಂದು ಬಿಜೆಪಿ ಮುಂಬೈ ಘಟಕದ ಮುಖ್ಯಸ್ಥ ಅಮೀತ್ ಸತಮ್ ಮತ್ತು ಎಂಎಲ್ ಸಿ ಪ್ರವೀಣ್ ದಾರೇಕರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಫೆಬ್ರವರಿ 2024 ರಲ್ಲಿ ಕ್ಯಾಮೆರಾದಲ್ಲಿ ನೇರಪ್ರಸಾರದಲ್ಲಿ ಸೆರೆಯಾದ ಆಘಾತಕಾರಿ ಕೊಲೆಯಲ್ಲಿ, ಅಭಿಷೇಕ್ ಘೋಸಾಲ್ಕರ್ ಅವರನ್ನು 'ಫೇಸ್ ಬುಕ್ ಲೈವ್ ನಲ್ಲಿ ಇರುವಾಗಲೇ ಮೌರಿಸ್ ನೊರೋನ್ಹಾ ಎಂಬ ವ್ಯಕ್ತಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘೋಸಾಲ್ಕರ್ ಮತ್ತು ನೊರೋನ್ಹಾ ನಡುವೆ ಹಲವಾರು ವಿಷಯಗಳಲ್ಲಿ ದೀರ್ಘಕಾಲದಿಂದ ವಿವಾದಗಳಿದ್ದವು.

Setback for Uddhav as Tejasvi Ghosalkar joins BJP
'ಗದ್ದರ್'ರನ್ನು 'ಗದ್ದರ್' ಎಂದು ಕರೆಯುವುದರಲ್ಲಿ ತಪ್ಪೇನಿದೆ?: ಕಾಮ್ರಾ ಬೆಂಬಲಕ್ಕೆ ಉದ್ಧವ್‌ ಠಾಕ್ರೆ

ಬಹು ನಿರೀಕ್ಷಿತ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆಗೂ ಮುನ್ನ ತೇಜಸ್ವಿ ಘೋಸಾಲ್ಕರ್ ಅವರು ಬಿಜೆಪಿ ಸೇರಿರುವುದು ಶಿವಸೇನೆ(ಯುಬಿಟಿ)ಗೆ ಭಾರೀ ಹಿನ್ನಡೆಯಾಗಿದೆ.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ತೇಜಸ್ವಿ ಅವರು, ಶಿವಸೇನೆ(ಯಬಿಟಿ)ಯಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದೇನೆ. ಈಗ ಹೊಸ ಪಕ್ಷದಲ್ಲೂ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com