ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: Air India Expressನಿಂದ ಪೈಲಟ್‌ಗೆ ನೋಟಿಸ್

ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್‌ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
Delhi airport scuffle: AI Express issues notice to pilot
ಏರ್ ಇಂಡಿಯಾ ಪೈಲಟ್ ವಿಜೇಂದರ್ ಸೆಜ್ವಾಲ್
Updated on

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಯ ಬಗ್ಗೆ ತನಿಖೆ ನಡೆಸಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮುಂದಿನ ವಾರ ಬಾಹ್ಯ ತನಿಖಾ ಸಮಿತಿ ರಚಿಸಲಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರದ ಘಟನೆಯ ನಂತರ, ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್‌ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಪೈಲಟ್ ವಿಜೇಂದರ್ ಸೆಜ್ವಾಲ್ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಪೈಲಟ್ ಕಾರ್ಮಿಕ ಕಾನೂನಿನ ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ತನಿಖೆಗಾಗಿ ಮುಂದಿನ ವಾರ ಬಾಹ್ಯ ತನಿಖಾ ಸಮಿತಿಯನ್ನು ರಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Delhi airport scuffle: AI Express issues notice to pilot
Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

ನಿನ್ನೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ವಿಮಾನ ಹತ್ತಲು ಕ್ಯೂ ಕಡಿತಗೊಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಪೈಸ್‌ಜೆಟ್ ಪ್ರಯಾಣಿಕ ಅಂಕಿತ್ ದಿವಾನ್ ಆರೋಪಿಸಿದ್ದಾರೆ. ಅಲ್ಲದೆ ತಮ್ಮ ಮುಖದ ಮೇಲೆ ರಕ್ತವಿರುವ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ಶನಿವಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ತಕ್ಷಣದ ಪರಿಣಾಮದೊಂದಿಗೆ ಪೈಲಟ್‌ನನ್ನು ಕೆಲಸದಿಂದ ತೆಗೆದುಹಾಕುವಂತೆ ವಿಮಾನಯಾನ ಸಂಸ್ಥೆಗೆ ಸೂಚಿಸಿದೆ.

"ಔಪಚಾರಿಕ ತನಿಖೆಗೆ ಆದೇಶಿಸಲಾಗಿದೆ. ಬಿಸಿಎಎಸ್ ಮತ್ತು ಸಿಐಎಸ್‌ಎಫ್‌ನಿಂದ ವಿವರವಾದ ವರದಿಗಳನ್ನು ಕೋರಲಾಗಿದೆ" ಎಂದು ಸಚಿವಾಲಯವು ದಿವಾನ್ ಅವರ ಪೋಸ್ಟ್‌ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com