ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಶಿವಸೇನಾ (UBT) ಎಂಎನ್ ಎಸ್ 'ಮೈತ್ರಿ' ಬಗ್ಗೆ ಅಧಿಕೃತ ಘೋಷಣೆ!

ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉದ್ಧವ್ ಠಾಕ್ರೆ, ಎರಡು ಪಕ್ಷಗಳು ಒಟ್ಟಿಗೆ ಇರಲು ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವುದಾಗಿ ತಿಳಿಸಿದರು.
Uddhav Thackeray and Raj Thackeray
ಉದ್ಧವ್ ಠಾಕ್ರೆ, ರಾಜ್ ಠಾಕ್ರೆ ಜಂಟಿ ಸುದ್ದಿಗೋಷ್ಟಿ
Updated on

ಮುಂಬೈ: ಜನವರಿ 15 ರಂದು ನಡೆಯಲಿರುವ ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವ ನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಮೈತ್ರಿ ಘೋಷಿಸಿದರು. ಈ ಮೂಲಕ ಒಂದು ತಿಂಗಳಿನಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉದ್ಧವ್ ಠಾಕ್ರೆ, ಎರಡು ಪಕ್ಷಗಳು ಒಟ್ಟಿಗೆ ಇರಲು ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವುದಾಗಿ ತಿಳಿಸಿದರು.

ಆದಾಗ್ಯೂ, ಬಹು ನಿರೀಕ್ಷಿತ ಬಿಎಂಸಿ ಚುನಾವಣೆಯ ಸ್ಥಾನ ಹೊಂದಾಣಿಕೆ ಕುರಿತು ರಾಜ್ ಠಾಕ್ರೆ ಯಾವುದೇ ವಿವರ ಹಂಚಿಕೊಳ್ಳಲಿಲ್ಲ. ಮುಂಬೈನ ಮೇಯರ್ ಮರಾಠಿ ಮತ್ತು ನಮ್ಮವರೇ ಆಗಿರುತ್ತಾರೆ" ಎಂದು ರಾಜ್ ಠಾಕ್ರೆ ಹೇಳಿದರು.

Uddhav Thackeray and Raj Thackeray
20 ವರ್ಷಗಳ ನಂತರ ಬಿಎಂಸಿ ಚುನಾವಣೆಗಾಗಿ ಒಂದಾದ ಠಾಕ್ರೆ ಸಹೋದರರು!

ಜನವರಿ 15 ರಂದು ಮುಂಬೈ ಜೊತೆಗೆ ನಡೆಯಲಿರುವ ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ ಮತ್ತಿತರ ರಾಜ್ಯದ 27 ಮಹಾನಗರ ಪಾಲಿಕೆ ಚುನಾವಣೆಗೆ ಪಕ್ಷದ ಸೀಟು ಹೊಂದಾಣಿಕೆ ಅಂತಿಮಗೊಂಡಿದೆ. ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಉಭಯ ಪಕ್ಷಗಳ ನಡುವೆ ಮೈತ್ರಿಗೆ ಮಾತುಕತೆ ನಡೆಯುತ್ತಿದೆ. ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆ ಸಹಿಸದವರು ನಮ್ಮೊಂದಿಗೆ ಬರಬಹುದು ಎಂದು ಉದ್ಧವ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com