ಕೇಂದ್ರ ಬಜೆಟ್ 2025: ನವೀಕೃತ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಮಯ ಮಿತಿ ವಿಸ್ತರಣೆ

ನೇರ ತೆರಿಗೆ ವಿವಾದಗಳನ್ನು ಇತ್ಯರ್ಥಪಡಿಸಲು 33,000 ತೆರಿಗೆದಾರರು ವಿವಾದ್ ಸೆ ವಿಶ್ವಾಸ್ 2.0 ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ ಆದಾಯ ತೆರಿಗೆ ಬಹುಮುಖ್ಯವಾದ ಭಾಗವಾಗಿದ್ದು, ಮೋದಿ ಸರ್ಕಾರದ ಮೇಲೆ ಇಡೀ ದೇಶವೇ ಕಣ್ಣಿಟ್ಟಿತ್ತು. ನಿರೀಕ್ಷೆಯಂತೆ ಕೇಂದ್ರ ಬಜೆಟ್‌ನಲ್ಲಿ ದೇಶದ ಮಧ್ಯಮ ವರ್ಗದ ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.

ನವೀಕೃತ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಸಮಯ ಮಿತಿಯನ್ನು ವಿಸ್ತರಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಪ್ರಸ್ತುತ ಎರಡು ವರ್ಷಗಳಿಂದ ನಾಲ್ಕು ವರ್ಷಗಳಿಗೆ ಕಾಲಮಿತಿಯನ್ನು ವಿಸ್ತರಿಸಲು ಪ್ರಸ್ತಾಪಿಸಲಾಗಿತ್ತು.

2014 ರಿಂದ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ 14 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ನಿರ್ದಿಷ್ಟ ಹಣಕಾಸು ಸಂಸ್ಥೆಗಳಿಂದ ಶಿಕ್ಷಣ ಸಾಲವನ್ನು ಪಡೆದ ಸಂದರ್ಭಗಳಲ್ಲಿ ಶಿಕ್ಷಣ ಉದ್ದೇಶಗಳಿಗಾಗಿ ಹಣ ರವಾನೆಗಾಗಿ ಟಿಸಿಎಸ್ (ಮೂಲದಲ್ಲಿ ತೆರಿಗೆ ಸಂಗ್ರಹಿಸಲಾಗಿದೆ) ವಿನಾಯಿತಿಯನ್ನು ಸೀತಾರಾಮನ್ ಪ್ರಸ್ತಾಪಿಸಿದರು.

ನೇರ ತೆರಿಗೆ ವಿವಾದಗಳನ್ನು ಇತ್ಯರ್ಥಪಡಿಸಲು 33,000 ತೆರಿಗೆದಾರರು ವಿವಾದ್ ಸೆ ವಿಶ್ವಾಸ್ 2.0 ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

ಹಿರಿಯ ನಾಗರಿಕರಿಗೆ ಬಡ್ಡಿ ಆದಾಯದ ಮೇಲಿನ ತೆರಿಗೆ ಕಡಿತದ ಮಿತಿಯನ್ನು 1 ಲಕ್ಷ ರೂ.ಗೆ ದ್ವಿಗುಣಗೊಳಿಸಲಾಗುವುದು. ಬಾಡಿಗೆಯ ಮೇಲಿನ ಟಿಡಿಎಸ್ ಮಿತಿಯನ್ನು 6 ಲಕ್ಷ ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಇದಲ್ಲದೆ, ತೆರಿಗೆ ಪ್ರಯೋಜನಗಳನ್ನು ಪಡೆಯಲು ಸ್ಟಾರ್ಟ್‌ಅಪ್‌ಗಳಿಗೆ ಸಂಯೋಜನೆಯ ಅವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದಿದ್ದಾರೆ.

Representational image
ಬಜೆಟ್ ಮಂಡನೆಗೆ ಮುನ್ನ 'ಬಾಹಿ-ಖಾತಾ' ಟ್ಯಾಬ್ಲೆಟ್ ನೊಂದಿಗೆ ಪೋಸ್ ಕೊಟ್ಟ ನಿರ್ಮಲಾ ಸೀತಾರಾಮನ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com