ದೆಹಲಿ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು; ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ

ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ.
ಎಎಪಿ ನಾಯಕಿ ಅತಿಶಿ ಭಾನುವಾರ ದೆಹಲಿಯ ರಾಜ್ ನಿವಾಸದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.
ಎಎಪಿ ನಾಯಕಿ ಅತಿಶಿ ಭಾನುವಾರ ದೆಹಲಿಯ ರಾಜ್ ನಿವಾಸದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.
Updated on

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲನುಭವಿಸಿದ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಕಲ್ಕಾಜಿ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಅತಿಶಿ ಅವರು, ರಾಜ್ ನಿವಾಸದಲ್ಲಿ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರೋಬ್ಬರಿ 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.

ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಮುಗಿಸಿ ವಾಪಸ್ಸಾದ ನಂತರ ಮುಂದಿನ ವಾರ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಯಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಎಎಪಿ ನಾಯಕಿ ಅತಿಶಿ ಭಾನುವಾರ ದೆಹಲಿಯ ರಾಜ್ ನಿವಾಸದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.
ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ: ದೆಹಲಿ ಸಿಎಂ ಅತಿಶಿ

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪಗಳ ನಡುವೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com