ರಾಜ್ಯಸಭೆ
ರಾಜ್ಯಸಭೆ

ವಕ್ಫ್ ಮಸೂದೆ ಕುರಿತ JPC ವರದಿ ರಾಜ್ಯಸಭೆಯಲ್ಲಿ ಮಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.
Published on

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿ(JPC)ಯ ವರದಿಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಯಿತು.

ಜೆಪಿಸಿ ವರದಿ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದವು ಮತ್ತು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ರಾಜ್ಯಸಭೆ
ವಕ್ಫ್ ತಿದ್ದುಪಡಿ ಮಸೂದೆ ಕುರಿತ ವರದಿಯನ್ನು ಲೋಕಸಭಾ ಸ್ಪೀಕರ್‌ಗೆ ಸಲ್ಲಿಸಿದ ಜೆಪಿಸಿ

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, "ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ..." ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.

ಆದಾಗ್ಯೂ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಹೀಗಾಗಿ ಧಂಖರ್ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com