ಮಹಾರಾಷ್ಟ್ರ ಡಿಸಿಎಂ ಶಿಂಧೆ ಕಾರು ಸ್ಫೋಟಿಸುವುದಾಗಿ ಬೆದರಿಕೆ; ಮುಂಬೈ ಪೊಲೀಸರಿಂದ ತನಿಖೆ ಆರಂಭ

ಬೆದರಿಕೆ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
DCM Eknath Shinde
ಡಿಸಿಎಂ ಏಕನಾಥ್ ಶಿಂಧೆ
Updated on

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಅನಾಮಧೇಯ ಕರೆಗಳು ಮತ್ತು ಇಮೇಲ್‌ಗಳು ಮುಂಬೈ ಪೊಲೀಸರಿಗೆ ಗುರುವಾರ ಬೆಳಗ್ಗೆ ಬಂದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಗೋರೆಗಾಂವ್, ಜೆ ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

DCM Eknath Shinde
ರಾಜಕೀಯ ತಂತ್ರವೋ, ಬಿಜೆಪಿಯತ್ತ ಒಲವೋ? ಡಿಸಿಎಂ ಶಿಂಧೆ ಜೊತೆ Sharad Pawar ವೇದಿಕೆ ಹಂಚಿಕೆ, ಹೊಗಳಿಕೆ; INDIA ಕೂಟಕ್ಕೆ ಶಾಕ್!

ಕರೆ ಮಾಡಿದವರು ಡಿಸಿಎಂ ಶಿಂಧೆ ಅವರ ಕಾರನ್ನು ಬಾಂಬ್‌ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅವರು ಹೇಳಿದರು.

ಬೆದರಿಕೆ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com