ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿತ್ತು: ಮಾಯಾವತಿ

"ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ".
ಬಿಎಸ್ ಪಿ ನಾಯಕಿ ಮಾಯಾವತಿ
ಬಿಎಸ್ ಪಿ ನಾಯಕಿ ಮಾಯಾವತಿ
Updated on

ಲಖನೌ: ಇತ್ತೀಚಿಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿ ಸ್ಪರ್ಧಿಸಿತ್ತು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ತಮ್ಮ ಪಕ್ಷದ ಪ್ರಸ್ತುತ ರಾಜಕೀಯ ವಿಧಾನವನ್ನು ಪ್ರಶ್ನಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ್ದಾರೆ.

ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸೇರದಿರುವುದರಿಂದ ನಿರಾಶೆಗೊಂಡಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ, "ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ" ಎಂದು ಟೀಕಿಸಿದ್ದಾರೆ.

"ಇಲ್ಲದಿದ್ದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಹೆಚ್ಚಿನ ಅಭ್ಯರ್ಥಿಗಳು ಠೇವಣಿಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗದಂತಹ ಕೆಟ್ಟ ಸ್ಥಿತಿಯಲ್ಲಿರುತ್ತಿರಲಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್ ಪಿ ನಾಯಕಿ ಮಾಯಾವತಿ
BSP ಇಂಡಿಯಾ ಒಕ್ಕೂಟಕ್ಕೆ ಸೇರಿದ್ದರೆ 2024ರ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತಿತ್ತು; ಮಾಯಾವತಿ ರಾಜಕೀಯ ತಂತ್ರವೇನು?: ರಾಹುಲ್ ಗಾಂಧಿ

ಇತರರ ಕಡೆಗೆ ಬೆರಳು ತೋರಿಸುವ ಮೊದಲು, ಅವರು ಖಂಡಿತವಾಗಿಯೂ ತಮ್ಮದೇ ಆದ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ಮಾಯಾವತಿ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.

ದೆಹಲಿಯಲ್ಲಿರುವ ಹೊಸ ಬಿಜೆಪಿ ಸರ್ಕಾರಕ್ಕೆ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಸವಾಲು ಇದೆ ಎಂದು ಮಾಯಾವತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com