ಆಂಧ್ರಪ್ರದೇಶ: ಮಹಾಶಿವರಾತ್ರಿಯಂದು ಗೋದಾವರಿ ನದಿಯಲ್ಲಿ ಮುಳುಗಿ ಐವರು ಸಾವು

12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ತಾಡಿಪುಡಿ: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ಮಹಾಶಿವರಾತ್ರಿ ದಿನವಾದ ಇಂದು ಬೆಳಗ್ಗೆ ಸ್ನಾನಕ್ಕೆಂದು ತೆರಳಿದ್ದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಸ್ನಾನ ಮಾಡಲೆಂದು ನದಿ ನೀರಿಗಿಳಿದ 12 ಜನರ ಗುಂಪಿನಲ್ಲಿ ಐವರು ಗೋದಾವರಿ ನದಿಯಲ್ಲಿ ಮುಳುಗಿದ್ದಾರೆ. ಅವರು ಶಿವರಾತ್ರಿ ಹಬ್ಬದ ಸ್ನಾನದ ನಂತರ ಹತ್ತಿರದ ದೇವಸ್ಥಾನಕ್ಕೆ ಹೋಗಲು ಉದ್ದೇಶಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Casual Images
ಶಿವರಾತ್ರಿಯಂದು ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರ ಸಾವು!

ಮೃತರು ಮತ್ತು ಬದುಕುಳಿದವರಲ್ಲಿ ಹೆಚ್ಚಿನವರು 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಮೃತರ ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com