ಮಣಿಪುರದ 19ನೇ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಇಂದು ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದರು.
ಅಜಯ್ ಕುಮಾರ್ ಭಲ್ಲಾ
ಅಜಯ್ ಕುಮಾರ್ ಭಲ್ಲಾ
Updated on

ಗುವಾಹಟಿ: ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶುಕ್ರವಾರ ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದರು.

ಅಸ್ಸಾಂ-ಮೇಘಾಲಯ ಕೇಡರ್‌ನ 1984-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ(IAS) ಅಧಿಕಾರಿ ಭಲ್ಲಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.

ಅಜಯ್ ಕುಮಾರ್ ಭಲ್ಲಾ
ಮಣಿಪುರ: ಇಂಫಾಲ್ ಪಶ್ಚಿಮ ಜಿಲ್ಲೆಯ ಗ್ರಾಮದ ಮೇಲೆ ಶಂಕಿತ ಉಗ್ರರ ದಾಳಿ

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಭಲ್ಲಾ ಅವರಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com