'ಪುಷ್ಪ 2' ಕಾಲ್ತುಳಿತ ಪ್ರಕರಣ: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಬಾಲಕನನ್ನು ಭೇಟಿಯಾದ ಅಲ್ಲು ಅರ್ಜುನ್!

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ
 Allu Arjun
ನಟ ಅಲ್ಲು ಅರ್ಜುನ್
Updated on

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ದುರಂತ ಸಂಭವಿಸಿದ 30 ದಿನಗಳ ನಂತರ, ನಟ ಅಲ್ಲು ಅರ್ಜುನ್ ಮಂಗಳವಾರ ಬೆಳಗ್ಗೆ ಸಿಕಂದರಾಬಾದ್‌ನ ಕಿಮ್ಸ್‌ನಲ್ಲಿ ಗಾಯಾಳು ಒಂಬತ್ತು ವರ್ಷದ ಶ್ರೀ ತೇಜ್ ಅವರನ್ನು ಭೇಟಿ ಮಾಡಿದರು. ಅಲ್ಲು ಅರ್ಜುನ್ ಜೊತೆ TGFDC ಅಧ್ಯಕ್ಷ ದಿಲ್ ರಾಜು ಕೂಡ ಇದ್ದರು. ಪೊಲೀಸ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

ಆರಂಭದಲ್ಲಿ ಡಿಸೆಂಬರ್ 5 ರಂದು ಶ್ರೀ ತೇಜ್ ಅವರನ್ನು ಭೇಟಿ ಮಾಡಲು ಅಲ್ಲು ಅರ್ಜುನ್ ಯೋಜಿಸಿದ್ದರು. ಆದರೆ ಅವರ ಭೇಟಿಯನ್ನು ಮರುಪರಿಶೀಲಿಸುವಂತೆ ರಾಮಗೋಪಾಲಪೇಟೆ ಪೊಲೀಸರು ನೋಟಿಸ್ ನೀಡಿದ ನಂತರ ಭೇಟಿಯನ್ನು ರದ್ದುಗೊಳಿಸಿದ್ದರು. ಆದರೆ, ನಂತರದ ನೋಟಿಸ್‌ನಲ್ಲಿ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಮಾಡಲು ಸಿದ್ಧ ಎಂದು ಪೊಲೀಸರು ತಿಳಿಸಿದ್ದರು.

ಆಸ್ಪತ್ರೆ ಮತ್ತು ಸುತ್ತಮುತ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಭೇಟಿಯನ್ನು ರಹಸ್ಯವಾಗಿಡುವಂತೆ ಮನವಿ ಮಾಡುತ್ತೇವೆ. ರಾಮಗೋಪಾಲಪೇಟೆ ಪೊಲೀಸರು ಭೇಟಿ ವೇಳೆ ಬೆಂಗಾವಲಾಗಿ ಇರುತ್ತಾರೆ ಎಂದು ನೋಟಿಸ್ ನಲ್ಲಿ ಹೇಳಲಾಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಲ್ಲು ಅರ್ಜುನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

 Allu Arjun
ಕಾಲ್ತುಳಿತ ಪ್ರಕರಣ: 3 ಗಂಟೆ ಕಾಲ ವಿಚಾರಣೆ ಎದುರಿಸಿದ ಅಲ್ಲು ಅರ್ಜುನ್; ಪೊಲೀಸರು ಕೇಳಿದ ಪ್ರಶ್ನೆಗಳಿವು...

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಪ್ರದರ್ಶನದ ವೇಳೆ 39 ವರ್ಷದ ರೇವತಿ ಪ್ರಾಣ ಕಳೆದುಕೊಂಡಿದ್ದರು. ಅವರ ಒಂಬತ್ತು ವರ್ಷದ ಮಗ ಶ್ರೀ ತೇಜ್ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ 34 ದಿನಗಳಿಂದ ಶ್ರೀ ತೇಜ್ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com