ನವದೆಹಲಿ: ಕೇಂದ್ರ ಸಚಿವ ಕಿಶನ್ ರೆಡ್ಡಿ ನಿವಾಸದಲ್ಲಿ ಪ್ರಧಾನಿ ಮೋದಿ ಸಂಕ್ರಾಂತಿ ಆಚರಣೆ!

ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ ಹಬ್ಬದ ಮಹತ್ವವನ್ನು ಪ್ರಧಾನಿ ಮೋದಿ ತಿಳಿಸಿದರು. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಅನೇಕ ಸಚಿವರು ಸೇರಿದಂತೆ ತೆಲುಗಿನ ಖ್ಯಾತ ನಟ ಚಿರಂಜೀವಿ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಉಪಸ್ಥಿತರಿದ್ದರು.
PM Modi
ಗೋವಿಗೆ ಬಾಳೆಹಣ್ಣು ತಿನ್ನಿಸಿದ ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಕೇಂದ್ರ ಸಚಿವರು ಆಗಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಯಲ್ಲಿ ಪಾಲ್ಗೊಂಡರು. ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ ಹಬ್ಬದ ಮಹತ್ವವನ್ನು ಪ್ರಧಾನಿ ಮೋದಿ ತಿಳಿಸಿದರು. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಅನೇಕ ಸಚಿವರು ಸೇರಿದಂತೆ ತೆಲುಗಿನ ಖ್ಯಾತ ನಟ ಚಿರಂಜೀವಿ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಉಪಸ್ಥಿತರಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬವನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿಯ ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಕೃತಜ್ಞತೆ, ಸಮೃದ್ಧಿ ಮತ್ತು ಹೊಸತನದ ಆಚರಣೆಯಾಗಿದೆ ಎಂದಿದ್ದಾರೆ.

ಎಲ್ಲರಿಗೂ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಶುಭಾಶಯಗಳು. ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯ ಋತುವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com