ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿ ಸ್ಪರ್ಧೆಗೆ ಸಿದ್ಧ: NCP ನಾಯಕ ದಿಲೀಪ್ ವಾಲ್ಸೆ

"ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲಾ ಪಕ್ಷಗಳು (ಮಹಾಯುತಿಯ) ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತವೆ. ಮೈತ್ರಿ ಕಾರ್ಯರೂಪಕ್ಕೆ ಬರದಿದ್ದರೆ, ಎನ್‌ಸಿಪಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧವಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
Walse Patil
ವಾಲ್ಸೆ ಪಾಟೀಲ್online desk
Updated on

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಎನ್ ಸಿಪಿ ನಾಯಕ ದಿಲೀಪ್ ವಾಲ್ಸೆ ಹೇಳಿದ್ದಾರೆ.

ಮಹಾರಾಷ್ಟ್ರಕ್ಕೆ ಸಂಬಂಧಿಸಿದಂತೆ ಎನ್ ಸಿಪಿಯ ನಡೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಮಹಾವಿಕಾಸ್ ಅಘಾಡಿಯ ಭಾಗವಗಿರುವ ಶಿವಸೇನೆ ಉದ್ಧವ್ ಠಾಕ್ರೆ ಬಣ ಸಹ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿತ್ತು.

ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ, ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿದ್ದು, ಇದರಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ಕೂಡ ಸೇರಿವೆ.

ಅಹಲ್ಯಾನಗರ ಜಿಲ್ಲೆಯ ಶಿರಡಿಯಲ್ಲಿ ನಡೆಯಲಿರುವ ಎನ್‌ಸಿಪಿ ಸಮಾವೇಶದಲ್ಲಿ ಭಾಗವಹಿಸಲು ವಾಲ್ಸೆ ಪಾಟೀಲ್ ಶಿರಡಿಯಲ್ಲಿದ್ದರು. "ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲಾ ಪಕ್ಷಗಳು (ಮಹಾಯುತಿಯ) ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತವೆ. ಮೈತ್ರಿ ಕಾರ್ಯರೂಪಕ್ಕೆ ಬರದಿದ್ದರೆ, ಎನ್‌ಸಿಪಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧವಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Walse Patil
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಇಂಡಿಯಾ ಬಣದ ಪಾತ್ರ ರಾಷ್ಟ್ರಮಟ್ಟದಲ್ಲಿ ಮಾತ್ರ ಎಂದ ಶರದ್ ಪವಾರ್!

ಅಹಲ್ಯಾನಗರ ಜಿಲ್ಲೆಯ ಶಿರಡಿಯಲ್ಲಿ ನಡೆಯಲಿರುವ ಎನ್‌ಸಿಪಿ ಸಮಾವೇಶದಲ್ಲಿ ಭಾಗವಹಿಸಲು ವಾಲ್ಸೆ ಪಾಟೀಲ್ ಶಿರಡಿಯಲ್ಲಿದ್ದರು. "ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎಲ್ಲಾ ಪಕ್ಷಗಳು (ಮಹಾಯುತಿಯ) ತಮ್ಮ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತವೆ. ಮೈತ್ರಿ ಕಾರ್ಯರೂಪಕ್ಕೆ ಬರದಿದ್ದರೆ, ಎನ್‌ಸಿಪಿ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧವಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು, ಅದರ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com