ಬಾಳಾ ಠಾಕ್ರೆಗೆ ಭಾರತ ರತ್ನ ನೀಡುವಂತೆ ಶಿವಸೇನೆ(ಯುಬಿಟಿ) ಆಗ್ರಹ

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು ಆರೋಪಿಸಿದರು.
ಬಾಳಾ ಠಾಕ್ರೆ (ಸಂಗ್ರಹ ಚಿತ್ರ)
ಬಾಳಾ ಠಾಕ್ರೆ (ಸಂಗ್ರಹ ಚಿತ್ರ)
Updated on

ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ" ಕೆಲವು ವ್ಯಕ್ತಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಗೌರವನ್ನು ನೀಡಿದೆ ಎಂದು ಆರೋಪಿಸಿದರು.

"ಆದರೆ ದೇಶದಲ್ಲಿ ನಿಜವಾಗಿಯೂ ಹಿಂದುತ್ವದ ಬೀಜ ಬಿತ್ತಿದ ವ್ಯಕ್ತಿಗೆ ಭಾರತ ರತ್ನವನ್ನೂ ನೀಡಬೇಕು. ಶಿವಸೇನೆ ಸಂಸ್ಥಾಪಕರಿಗೆ ಭಾರತ ರತ್ನ ಏಕೆ ನೀಡಿಲ್ಲ? 'ಹಿಂದೂ ಹೃದಯ ಸಾಮ್ರಾಟ್' ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು. ಇದು ಶಿವಸೇನೆ(ಯುಬಿಟಿ)ಯ ಬೇಡಿಕೆಯಾಗಿದೆ" ಎಂದು ಅವರು ಹೇಳಿದರು.

ಬಾಳಾ ಠಾಕ್ರೆ (ಸಂಗ್ರಹ ಚಿತ್ರ)
'ಭಾರತ ರತ್ನ'ಕ್ಕೆ ಹೆಸರು ಸೂಚನೆ: ರತನ್ ಟಾಟಾ, ಡಾ.ಮನಮೋಹನ್ ಸಿಂಗ್ ಮುಂಚೂಣಿಯಲ್ಲಿ

ಠಾಕ್ರೆ ಅವರ ಜನ್ಮ ಶತಮಾನೋತ್ಸವಕ್ಕೆ ಒಂದು ವರ್ಷ ಬಾಕಿ ಇದೆ. "ಶತಮಾನೋತ್ಸವ ಆರಂಭವಾಗುವ ಮೊದಲು, ಅವರಿಗೆ ಭಾರತ ರತ್ನ ನೀಡುವುದು ಅವಶ್ಯಕ. ನೀವು ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕಿಲ್ಲ. ಆದರೆ ಬಾಳಾ-ಸಾಹೇಬ್ ಅವರಿಗೆ ಭಾರತ ರತ್ನ ನೀಡಿದರೆ, ಅದು ವೀರ್ ಸಾವರ್ಕರ್ ಅವರಿಗೆ ನೀಡಿದ ಗೌರವವಾಗುತ್ತದೆ" ಎಂದು ರಾಜ್ಯಸಭಾ ಸದಸ್ಯ ಹೇಳಿದರು.

ಪಕ್ಷದ ಸಹೋದ್ಯೋಗಿ ಮತ್ತು ಮುಂಬೈ ದಕ್ಷಿಣ ಸಂಸದ ಅರವಿಂದ್ ಸಾವಂತ್ ಕೂಡ ಇದೇ ಬೇಡಿಕೆಯನ್ನು ಮಂಡಿಸಿದರು. "ತಾನು ಹಿಂದುತ್ವ ಪರ ಎಂದು ಕರೆದುಕೊಳ್ಳುವ ಕೇಂದ್ರ ಸರ್ಕಾರ, ಠಾಕ್ರೆ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು. ನಾವು ಇದನ್ನು ಬಲವಾಗಿ ಒತ್ತಾಯಿಸುತ್ತೇವೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com