ದೆಹಲಿ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೂರ್ವಾಂಚಲಿಗರಿಗೆ ಪ್ರತ್ಯೇಕ ಸಚಿವಾಲಯ, ಬಜೆಟ್ ಭರವಸೆ

ಆಮ್ ಆದ್ಮಿ ಪಕ್ಷ(ಎಎಪಿ) ದೆಹಲಿಯ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ನಾಶಪಡಿಸಿ ಅದನ್ನು ಕಸದ ಬುಟ್ಟಿಯನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕರು
Updated on

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ದೆಹಲಿಯಲ್ಲಿ ಪೂರ್ವಾಂಚಲಿಗರಿಗೆ ಪ್ರತ್ಯೇಕ ಸಚಿವಾಲಯ ಮತ್ತು ಬಜೆಟ್ ರೂಪಿಸುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.

ಆಮ್ ಆದ್ಮಿ ಪಕ್ಷ(ಎಎಪಿ) ದೆಹಲಿಯ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ನಾಶಪಡಿಸಿ ಅದನ್ನು ಕಸದ ಬುಟ್ಟಿಯನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಎಎಪಿ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ 382 ಕೋಟಿ ರೂ.ಗಳಷ್ಟು ಭ್ರಷ್ಟಾಚಾರ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಬಿಹಾರ ಘಟಕದ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಅಖಿಲೇಶ್ ಪ್ರಸಾದ್ ಸಿಂಗ್, ದೆಹಲಿ ವಿಶ್ವ ದರ್ಜೆಯ ನಗರವಾಗಿದ್ದರೆ, ಅದರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಪೂರ್ವಾಂಚಲಿಗರದ್ದು ಅಷ್ಟೇ ಪಾತ್ರವಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು
ದೆಹಲಿ ಚುನಾವಣೆ: ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ, ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ

"ಇಂದು ನಾವು ಎರಡು ಪ್ರಮುಖ ಘೋಷಣೆಗಳನ್ನು ಮಾಡಲು ಬಯಸುತ್ತೇವೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೂರ್ವಾಂಚಲಿಗರಿಗೆ ಪ್ರತ್ಯೇಕ ಸಚಿವಾಲಯ ಮತ್ತು ಪ್ರತ್ಯೇಕ ಬಜೆಟ್ ಮಂಡಿಸುತ್ತೇವೆ. ಇದರಿಂದಾಗಿ ಅವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಬಹುದು" ಎಂದು ಸಿಂಗ್ ತಿಳಿಸಿದರು.

ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನ ಪೂರ್ವ ದೆಹಲಿ ನಿವಾಸಿಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಪೂರ್ವಾಂಚಲಿಗರು ಎಂದು ಕರೆಯಲಾಗುತ್ತದೆ. ಅವರು ದೆಹಲಿಯ ಹಲವಾರು ಕ್ಷೇತ್ರಗಳಲ್ಲಿ ನಿರ್ಣಾಯಕ ಮತಗಳನ್ನು ಹೊಂದಿದ್ದಾರೆ. ಇದರಿಂದಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಎಎಪಿ ಚುನಾವಣೆಯ ಸಮಯದಲ್ಲಿ ಅವರನ್ನು ಓಲೈಸುತ್ತವೆ.

ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com