ಸ್ವಲ್ಪ ಕಷ್ಟ ಆದರೂ... ಬಾಂಗ್ಲಾದ ಅಕ್ರಮ ವಲಸಿಗರಿಗೂ ಭಾರತ ನೆಲೆ ಕಲ್ಪಿಸಬೇಕು: ರಾಹುಲ್ ಮೆಂಟರ್ ಸ್ಯಾಮ್ ಪಿತ್ರೋಡಾ ವಿವಾದ!

ಬಾಂಗ್ಲಾದೇಶಿಗರು ಇಲ್ಲಿಗೆ ಬರಲು ಬಯಸಿದರೆ, ಅಕ್ರಮವಾಗಿಯಾದರೂ, ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ. ಸಹಿಸಿಕೊಳ್ಳಬೇಕು ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.
Sam Pitroda-Rahul Gandhi
ಸ್ಯಾಮ್ ಪಿತ್ರೋಡಾ-ರಾಹುಲ್ ಗಾಂಧಿ
Updated on

ನವದೆಹಲಿ: ಬಾಂಗ್ಲಾದೇಶಿ ವಲಸಿಗರು ಒಂದು ವೇಳೆ ಭಾರತಕ್ಕೆ ಬರಲು ಬಯಸಿದರೆ, ಅದು ಅಕ್ರಮವಾಗಿದ್ದರೂ ಸಹ ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಪ್ತ ಸಹಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ನಡುವೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಈ ಹೇಳಿಕೆ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಾಂಗ್ಲಾದೇಶಿಗರು ಇಲ್ಲಿಗೆ ಬರಲು ಬಯಸಿದರೆ, ಅಕ್ರಮವಾಗಿಯಾದರೂ, ಅವರು ಬರಲಿ. ನಾವು ಎಲ್ಲರನ್ನೂ ಸೇರಿಸಿಕೊಳ್ಳಬೇಕು. ನಮಗೆ ಅದರಿಂದ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ, ಸಹಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ವಲಸಿಗರು ಭಾರತದಲ್ಲಿ ನೆಲೆಸಬೇಕೆಂದು ಪ್ರತಿಪಾದಿಸಿದ್ದು ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರದ ಕಠಿಣ ಕ್ರಮವನ್ನು ಟೀಕಿಸಿದ ಪಿತ್ರೋಡಾ, ಸರ್ಕಾರವು ವಲಸೆಯನ್ನು ನಿಭಾಯಿಸುವ ಬದಲು ಜಾಗತಿಕ ತಾಪಮಾನದ ಏರಿಕೆಯಂತಹ ಸಾರ್ವಜನಿಕರಿಗೆ ಮುಖ್ಯವಾದ ಸಮಸ್ಯೆಗಳನ್ನು ಪರಿಹರಿಸುವತ್ತ ಹೆಚ್ಚು ಗಮನಹರಿಸಬೇಕು ಎಂದು ಒತ್ತಿ ಹೇಳಿದ್ದಾರೆ.

Sam Pitroda-Rahul Gandhi
Trump ಅಧಿಕಾರ ಸ್ವೀಕಾರ ಬೆನ್ನಲ್ಲೇ ಅಕ್ರಮ ವಲಸಿಗರ ವಿರುದ್ಧ ಸಮರ: ಗುರುದ್ವಾರಗಳ ಮೇಲೆ ಅಮೆರಿಕ ಅಧಿಕಾರಿಗಳ ತಪಾಸಣೆ!

ಫೆಬ್ರವರಿ 5ರ ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಸ್ಯಾಮ್ ಪಿತ್ರೋಡಾರ ಈ ಹೇಳಿಕೆ ರಾಜಕೀಯ ಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಆಡಳಿತಾರೂಢ ಎಎಪಿ ಬಾಂಗ್ಲಾದೇಶಿ ನುಸುಳುಕೋರರಿಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸುವಲ್ಲಿ ಭಾಗಿಯಾಗಿದೆ ಎಂದು ಬಿಜೆಪಿ ಆರೋಪಿಸಿದ್ದು ದೆಹಲಿಯ ಆಡಳಿತ ಪಕ್ಷವು ಮುಂಬರುವ ಚುನಾವಣೆಗಳಿಗೆ ಅವರನ್ನು "ಮತ ಬ್ಯಾಂಕ್" ಆಗಿ ಬಳಸುತ್ತಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com