ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ದೇಶದ ಮೊದಲ ರಾಜ್ಯ ಉತ್ತರಾಖಂಡ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದಲ್ಲಿ ಯುಸಿಸಿ ಜಾರಿ ಸಂಬಂಧ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.
 ಗೆಜೆಟ್ ಅಧಿಸೂಚನೆ ಬಿಡುಗಡೆ ಮಾಡಿದ ಸಿಎಂ ಧಾಮಿ
ಗೆಜೆಟ್ ಅಧಿಸೂಚನೆ ಬಿಡುಗಡೆ ಮಾಡಿದ ಸಿಎಂ ಧಾಮಿ
Updated on

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಒಳಗೊಂಡ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಸೋಮವಾರದಿಂದ ಜಾರಿಗೆ ಬಂದಿದೆ. ಇದರೊಂದಿಗೆ ದೇಶದಲ್ಲಿ ಯುಸಿಸಿ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದಲ್ಲಿ ಯುಸಿಸಿ ಜಾರಿ ಸಂಬಂಧ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ.

ಮದುವೆಗಳು, ವಿಚ್ಛೇದನ ಮತ್ತು ಲಿವ್-ಇನ್ ಸಂಬಂಧಗಳ ಕಡ್ಡಾಯ ಆನ್‌ಲೈನ್ ನೋಂದಣಿಗಾಗಿ ರಚಿಸಲಾದ ಪೋರ್ಟಲ್ ಮತ್ತು ನಿಯಮ ಹಾಗೂ ಗೆಜೆಟ್ ಅಧಿಸೂಚನೆಯನ್ನು ಪುಷ್ಕರ್ ಸಿಂಗ್ ಧಾಮಿ ಬಿಡುಗಡೆ ಮಾಡಿದರು.

 ಗೆಜೆಟ್ ಅಧಿಸೂಚನೆ ಬಿಡುಗಡೆ ಮಾಡಿದ ಸಿಎಂ ಧಾಮಿ
78ನೇ ಸ್ವಾತಂತ್ರ್ಯ ದಿನಾಚರಣೆ : 'ಏಕರೂಪ ನಾಗರಿಕ ಸಂಹಿತೆ', 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಪ್ರಧಾನಿ ಮೋದಿ ಕರೆ

"ಎಲ್ಲಾ ಧರ್ಮಗಳ ಪ್ರತಿಯೊಬ್ಬ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಒಳಗೊಂಡ ಯುಸಿಸಿ ಈ ಕ್ಷಣದಿಂದ ಸಂಪೂರ್ಣವಾಗಿ ಜಾರಿಗೆ ಬಂದಿದೆ. ಅದರ ಕೀರ್ತಿ ಸಂಪೂರ್ಣವಾಗಿ ರಾಜ್ಯದ ಜನರಿಗೆ ಸಲ್ಲುತ್ತದೆ" ಎಂದು ಧಾಮಿ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹೇಳಿದರು.

ಸ್ವಾತಂತ್ರ್ಯದ ನಂತರ ಯುಸಿಸಿಯನ್ನು (UCC) ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ಉತ್ತರಾಖಂಡ ರಾಜ್ಯವಾಗಿದೆ. ಈ ಕಾನೂನು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಾತ್ರಿಪಡಿಸುವ ಮೂಲಕ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ ಎಂದು ಅವರು ಹೇಳಿದರು.

2022 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಧಾಮಿ ರಾಜ್ಯದ ಜನರಿಗೆ ನೀಡಿದ ಪ್ರಮುಖ ಚುನಾವಣಾ ಪೂರ್ವ ಭರವಸೆಗಳಲ್ಲಿ ಯುಸಿಸಿ ಜಾರಿ ಸಹ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com