ನನ್ನ ಸಂಪೂರ್ಣ ಆಸ್ತಿ ನನ್ನ ಮಗಳಿಗೆ ಯಾಕೆ ಕೊಡಬಾರದು; ಷರಿಯಾ ಕಾನೂನು ವಿರುದ್ಧ ಸಮರ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 'EX Muslim ಮಹಿಳೆ'

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ನಾಲ್ಕು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಒಂದು ವಿಶಿಷ್ಟ ಪ್ರಕರಣವನ್ನು ದಾಖಲಾಗಿದೆ. ಕೇರಳದ ನಿವಾಸಿ ಸಫಿಯಾ ಪಿಎಂ ಎಂಬ ಮುಸ್ಲಿಂ ಮಹಿಳೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಒಂದು ಪ್ರಮುಖ ಪ್ರಶ್ನೆಯನ್ನು ಎತ್ತಿದ್ದಾರೆ. ತನ್ನನ್ನು 'ನಾಸ್ತಿಕ' ಎಂದು ಕರೆದುಕೊಳ್ಳುವ ಆಕೆ, ತನ್ನ ಉತ್ತರಾಧಿಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು (ಷರಿಯಾ ಕಾನೂನು) ಬದಲಿಗೆ 1925ರ ಭಾರತೀಯ ಉತ್ತರಾಧಿಕಾರ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ನಾಲ್ಕು ವಾರಗಳಲ್ಲಿ ಉತ್ತರ ಕೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ನಾಲ್ಕು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಮೇ ಮೊದಲ ವಾರದಲ್ಲಿ ನಡೆಯಲಿದೆ. ಸಫಿಯಾ ತನ್ನ ಸಂಪೂರ್ಣ ಆಸ್ತಿಯನ್ನು ತನ್ನ ಮಗಳಿಗೆ ನೀಡಲು ಬಯಸುತ್ತಾಳೆ. ಆದರೆ ಷರಿಯಾ ಕಾನೂನಿನ ಅಡಿಯಲ್ಲಿ ಆಕೆಯ ಆಸ್ತಿಯ 50 ಪ್ರತಿಶತವನ್ನು ಮಾತ್ರ ನೀಡಬೇಕಂತೆ. ಹೀಗಾಗಿ ಆಕೆ 'ಜಾತ್ಯತೀತ ಕಾನೂನು' ಅಂದರೆ ಭಾರತೀಯ ಉತ್ತರಾಧಿಕಾರ ಕಾಯ್ದೆ ಜಾರಿಗೆ ಬಯಸಿದ್ದಾರೆ.

ಸಫಿಯಾ ಪಿಎಂ ತನ್ನ ತಂದೆ ಇಸ್ಲಾಂ ಧರ್ಮವನ್ನು ಅನುಸರಿಸುವುದನ್ನು ಬಿಟ್ಟಿದ್ದರು. ಆದರೆ ಅಧಿಕೃತವಾಗಿ ಇಸ್ಲಾಂ ಧರ್ಮವನ್ನು ತೊರೆದಿಲ್ಲ. ಷರಿಯಾ ಕಾನೂನಿನ ಪ್ರಕಾರ, ಇಸ್ಲಾಂ ಧರ್ಮವನ್ನು ತ್ಯಜಿಸುವ ವ್ಯಕ್ತಿಯನ್ನು ಸಮುದಾಯದಿಂದ ಹೊರಹಾಕಲಾಗುತ್ತದೆ ಮತ್ತು ಆತನ ಹೆತ್ತವರ ಆಸ್ತಿಯಲ್ಲಿ ಯಾವುದೇ ಆನುವಂಶಿಕ ಹಕ್ಕುಗಳಿಲ್ಲ. ಷರಿಯಾ ಕಾನೂನಿನಡಿಯಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಆಸ್ತಿಯ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನದನ್ನು ವಿಲ್ ಮೂಲಕ ದಾನ ಮಾಡುವಂತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಉತ್ತರಾಧಿಕಾರ ಕಾನೂನಿನ ಕುರಿತು ಹೊಸ ಚರ್ಚೆ

ಷರಿಯಾ ಕಾನೂನಿನಡಿಯಲ್ಲಿ ಉತ್ತರಾಧಿಕಾರದ ನಿಯಮಗಳು ಮುಸ್ಲಿಂ ಮಹಿಳೆಯರ ವಿರುದ್ಧ ತಾರತಮ್ಯದಿಂದ ಕೂಡಿವೆ ಎಂದು ಸಫಿಯಾ ಪಿಎಂ ಹೇಳುತ್ತಾರೆ. ಭಾರತೀಯ ಸಂವಿಧಾನದ ಅಡಿಯಲ್ಲಿ ತಮ್ಮ ಆಸ್ತಿಯನ್ನು ಮುಕ್ತವಾಗಿ ವರ್ಗಾಯಿಸುವ ಹಕ್ಕು ತಮಗೆ ಇರಬೇಕು ಎಂದು ಅವರು ನಂಬುತ್ತಾರೆ. ಅವರ ಪ್ರಕರಣವು ಏಕರೂಪ ನಾಗರಿಕ ಸಂಹಿತೆ (UCC) ಬಗ್ಗೆ ಚರ್ಚೆಯನ್ನು ಹುಟ್ಟುಹಾಕಬಹುದು. ಇದರಲ್ಲಿ ಎಲ್ಲಾ ನಾಗರಿಕರಿಗೂ ಒಂದೇ ಕಾನೂನನ್ನು ಜಾರಿಗೆ ತರುವುದಾಗಿ ಹೇಳಲಾಗಿದೆ.

ಸಂಗ್ರಹ ಚಿತ್ರ
ವಕ್ಫ್(ತಿದ್ದುಪಡಿ) ಮಸೂದೆ ಕುರಿತ ಕರಡು ಅಂಗೀಕರಿಸಿದ ಜೆಪಿಸಿ; ಪ್ರಜಾಪ್ರಭುತ್ವ ವಿರೋಧಿ ಎಂದ ಪ್ರತಿಪಕ್ಷಗಳು

ವಿಚಾರಣೆಯ ಸಮಯದಲ್ಲಿ, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರಿಗೆ ಒಬ್ಬಳೇ ಮಗಳಿದ್ದು, ಅವರು ತಮ್ಮ ಸಂಪೂರ್ಣ ಆಸ್ತಿಯನ್ನು ಅವರಿಗೆ ನೀಡಲು ಬಯಸುತ್ತಾರೆ ಎಂದು ಹೇಳಿದರು. ಆದರೆ ಷರಿಯಾ ಕಾನೂನಿನಡಿಯಲ್ಲಿ ಅವಳು ಹಾಗೆ ಮಾಡಲು ಸಾಧ್ಯವಿಲ್ಲ. ಈ ವಿಷಯವು ಒಬ್ಬ ವ್ಯಕ್ತಿಗೆ ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯಕ್ಕೆ ಮುಖ್ಯವಾಗಬಹುದು ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಸಫಿಯಾ ಪಿಎಂ ಅವರ ಅರ್ಜಿಯನ್ನು ಅಂಗೀಕರಿಸಿದರೆ, ಅದು ಮುಸ್ಲಿಂ ಉತ್ತರಾಧಿಕಾರ ಕಾನೂನಿನಲ್ಲಿ ಐತಿಹಾಸಿಕ ಬದಲಾವಣೆಯನ್ನು ಗುರುತಿಸಬಹುದು. ಈ ಪ್ರಕರಣವು ಧಾರ್ಮಿಕ ಕಾನೂನು ಮತ್ತು ಭಾರತೀಯ ಸಂವಿಧಾನದ ಜಾತ್ಯತೀತ ನಿಬಂಧನೆಗಳನ್ನು ಸಮತೋಲನಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಪರಿಣಮಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com