Mali: ಅಲ್-ಖೈದಾ-ಸಂಬಂಧಿತ ಉಗ್ರರಿಂದ ಮೂವರು ಭಾರತೀಯರ ಅಪಹರಣ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ಮಾಲಿಯಾದ್ಯಂತ ಅನೇಕ ದಾಳಿಗಳನ್ನು ನಡೆಸಿರುವ ಅಲ್-ಖೈದಾ-ಸಂಬಂಧಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (JNIM)ಈ ಅಪಹರಣ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.
Casual Images
ಉಗ್ರರ ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಮಾಲಿಯಲ್ಲಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯರನ್ನು ನಿಷೇಧಿತ ಉಗ್ರಗಾಮಿ ಸಂಘಟನೆ ಅಲ್-ಖೈದಾ ಜೊತೆ ನಂಟು ಹೊಂದಿರುವ ಉಗ್ರರು ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಖಚಿತಪಡಿಸಿದ್ದಾರೆ. ಪಶ್ಚಿಮ ಮಾಲಿಯ ಕೇಯೆಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಫ್ಯಾಕ್ಟರಿ ಮೇಲೆ ಭಾರಿ ಶಸ್ತ್ರಸಜ್ಜಿತ ದಾಳಿಕೋರರು ಸಂಘಟಿತ ದಾಳಿ ನಡೆಸಿದಾಗ ಈ ಘಟನೆ ನಡೆದಿದೆ.

ದಾಳಿ ವೇಳೆ ಬಂದೂಕುಧಾರಿಗಳು ಕಾರ್ಖಾನೆಗೆ ನುಗ್ಗಿ ಕಾರ್ಮಿಕರನ್ನು ಒತ್ತೆಯಾಳಾಗಿ ತೆಗೆದುಕೊಂಡಿದ್ದಾರೆ ಎಂದು ಸ್ಥಳೀಯ ವರದಿಗಳು ಹೇಳಿವೆ. ಮಾಲಿಯಾದ್ಯಂತ ಅನೇಕ ದಾಳಿಗಳನ್ನು ನಡೆಸಿರುವ ಅಲ್-ಖೈದಾ-ಸಂಬಂಧಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮಿನ್ (JNIM)ಈ ಅಪಹರಣ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಇದನ್ನು ಶೋಚನೀಯ ಹಿಂಸಾಚಾರದಕೃತ್ಯ ಎಂದು ಖಂಡಿಸಿದ್ದು, ಕಾರ್ಮಿಕರ ಸುರಕ್ಷಿತ ಮತ್ತು ತ್ವರಿತ ಬಿಡುಗಡೆಯನ್ನು ಖಾತ್ರಿಪಡಿಸಲು ಮಾಲಿ ಸರ್ಕಾರವನ್ನು ಒತ್ತಾಯಿಸಿದೆ.

ಜುಲೈ 1 ರಂದು ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರ ಗುಂಪು ಕಾರ್ಖಾನೆಯ ಆವರಣದಲ್ಲಿ ಸಂಘಟಿತ ದಾಳಿ ನಡೆಸಿ ಮೂವರು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ. ಭಾರತ ಸರ್ಕಾರವು ಈ ಕೃತ್ಯವನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ. ನಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮಾಲಿ ಸರ್ಕಾರವನ್ನು ಒತ್ತಾಯಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬಮಾಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಒತ್ತೆಯಾಳುಗಳನ್ನು ರಕ್ಷಿಸಲು ಮಾಲಿಯನ್ ಅಧಿಕಾರಿಗಳು, ಸ್ಥಳೀಯ ಕಾನೂನು ಜಾರಿ ಮತ್ತು ಡೈಮಂಡ್ ಸಿಮೆಂಟ್ ಫ್ಯಾಕ್ಟರಿಯ ಆಡಳಿತದೊಂದಿಗೆ "ನಿಕಟ ಮತ್ತು ನಿರಂತರ ಸಂಪರ್ಕ"ದಲ್ಲಿದೆ. ಅಪಹರಣಕ್ಕೊಳಗಾದ ಕಾರ್ಮಿಕರ ಕುಟುಂಬಗಳಿಗೆ ಈ ಕಾರ್ಯಾಚರಣೆಯು ಮಾಹಿತಿ ನೀಡುತ್ತಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಭಾರತೀಯ ಪ್ರಜೆಗಳ ಸುರಕ್ಷಿತ ಮತ್ತು ಶೀಘ್ರ ಬಿಡುಗಡೆಗೆ ಅನುಕೂಲವಾಗುವಂತೆ ವಿವಿಧ ಹಂತಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.

Casual Images
ನಮ್ಮ ಮೇಲೆ ದಾಳಿ ಮಾಡಿದರೆ, ಪಾಕ್ ಸೇರಿ ಉಗ್ರರು ಎಲ್ಲೇ ಅಡಗಿದ್ದರೂ ಬೇಟೆಯಾಡುತ್ತೇವೆ: ಎಸ್ ಜೈಶಂಕರ್

ಈ ಮಧ್ಯೆ ಮಾಲಿಯಲ್ಲಿ ವಾಸಿಸುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಲು ಮತ್ತು ಸಹಾಯಕ್ಕಾಗಿ ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಒತ್ತಾಯಿಸಿದೆ. ಅಪಹರಣಕ್ಕೊಳಗಾದ ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸ್ಸಾತಿ ಖಾತ್ರಿಗೆ ಬದ್ಧವಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ MEA ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com