ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ ನಂತರ ಬಿಜೆಪಿ ಅಧ್ಯಕ್ಷರ ಆಯ್ಕೆ: ಐವರ ಹೆಸರು ಅಖೈರು

ಬಹುತೇಕ ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಮುಗಿದಿದೆ. ಇತ್ತೀಚೆಗೆ ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಬಿಜೆಪಿಯಿಂದ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
PM Narendra Modi
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: 12ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸ್ಥಳೀಯ ಚುನಾವಣೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಜುಲೈ 9 ಅಥವಾ 10 ರಂದು ತಮ್ಮ ವಿದೇಶ ಪ್ರವಾಸದಿಂದ ಹಿಂದಿರುಗಿದ ಕೆಲ ದಿನಗಳ ನಂತರ ಬಿಜೆಪಿ ತನ್ನ ಮುಂದಿನ ರಾಷ್ಟ್ರೀಯ ಅಧ್ಯಕ್ಷರಾಗಿ ಒಮ್ಮತದ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ.

ಬಹುತೇಕ ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಮುಗಿದಿದೆ. ಇತ್ತೀಚೆಗೆ ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಬಿಜೆಪಿಯಿಂದ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಬಿಹಾರ, ಸಿಕ್ಕಿಂ, ಗೋವಾ ಮತ್ತು ಅಸ್ಸಾಂನಂತಹ ಪ್ರಮುಖ ರಾಜ್ಯಗಳಲ್ಲಿ, ಹೊಸ ಅಧ್ಯಕ್ಷರು ಈಗಾಗಲೇ ಇದ್ದಾರೆ. ಉತ್ತರ ಪ್ರದೇಶ ಸೇರಿದಂತೆ ಉಳಿದ ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ.

ಮಳೆಗಾಲ ಅಧಿವೇಶನಕ್ಕೂ ಮುನ್ನ ಅಂತಿಮ ಆಯ್ಕೆ

ಈ ಪ್ರಕ್ರಿಯೆಯ ನಡುವೆ, ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಬಿಜೆಪಿ ಐದು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅವರಲ್ಲಿ ಒಬ್ಬರನ್ನು ಆಯ್ಕೆಮಾಡಲಿದೆ. ಜುಲೈ 21 ರಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲು ಜುಲೈ 10 ಮತ್ತು 19 ರ ನಡುವೆ ಅಂತಿಮ ಆಯ್ಕೆ ನಡೆಯುವ ನಿರೀಕ್ಷೆಯಿದೆ.

ಅಖೈರುಗೊಳಿಸಿದ ಅಭ್ಯರ್ಥಿಗಳಲ್ಲಿ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್, ವನತಿ ಶ್ರೀನಿವಾಸನ್ ಮತ್ತು ಬಿ.ಡಿ. ಶರ್ಮಾ ಇದ್ದಾರೆ. ಪ್ರಾದೇಶಿಕ ಚುನಾವಣೆಗಳಿಗೆ ಪಕ್ಷದ ಅತ್ಯುತ್ತಮ ಚುನಾವಣಾ ವ್ಯವಸ್ಥಾಪಕರಲ್ಲಿ ಒಬ್ಬರೆಂದು ಪರಿಗಣಿಸಲಾದ ಭೂಪೇಂದ್ರ ಯಾದವ್ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತದೆ. ಒಬಿಸಿ ವರ್ಗಕ್ಕೆ ಸೇರಿದ ಭೂಪೇಂದ್ರ ಯಾದವ್, ಮಹಾರಾಷ್ಟ್ರ (2024), ಉತ್ತರ ಪ್ರದೇಶ (2017) ಮತ್ತು ಬಿಹಾರ (2020) ಸೇರಿದಂತೆ ಹಲವಾರು ರಾಜ್ಯ ಚುನಾವಣೆಗಳಿಗೆ ಚುನಾವಣಾ ತಂತ್ರಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಭೂಪೇಂದ್ರ ಯಾದವ್ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮಿದರೆ, ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷದಿಂದ ಜನರಿಗೆ ಬಲವಾದ ಸಂದೇಶವನ್ನು ರವಾನಿಸುತ್ತದೆ, ಬಿಹಾರದಲ್ಲಿ 70ರಿಂದ 90 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಫಲಿತಾಂಶವನ್ನು ನಿರ್ಧರಿಸುವಲ್ಲಿ ಯಾದವ ಸಮುದಾಯವು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಬಿಹಾರದ ಬಿಜೆಪಿ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

PM Narendra Modi
ಬಿಜೆಪಿಯಲ್ಲಿ ರಾಷ್ಟ್ರಾಧ್ಯಕ್ಷರ ಬದಲಾವಣೆಯಾದರೆ ನಡ್ಡಾ ಸ್ಥಾನಕ್ಕೆ ಬದಲಿ ಯಾರು? ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಧರ್ಮೇಂದ್ರ ಪ್ರಧಾನ್

ಆರ್‌ಎಸ್‌ಎಸ್ ಮತ್ತು ಪಕ್ಷದ ಸಾಂಸ್ಥಿಕ ಸಂಘಟನೆಗಳೊಂದಿಗೆ ಬಲವಾದ ಸಂಪರ್ಕದಿಂದಾಗಿ ಧರ್ಮೇಂದ್ರ ಪ್ರಧಾನ್ ಅವರನ್ನು ಎರಡನೇ ಪ್ರಬಲ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ.

ಬಿಜೆಪಿ ತನ್ನ "ಮಿಷನ್ ಸೌತ್" ಯೋಜನೆಯನ್ನು ಕೇಂದ್ರೀಕರಿಸುತ್ತಿರುವ ದಕ್ಷಿಣ ಭಾರತದಿಂದ ಬಂದ ಪ್ರಹ್ಲಾದ್ ಜೋಶಿ ಅವರನ್ನು ಸಹ ಒಮ್ಮತದ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ. ಅವರು ಚುನಾವಣಾ ತಂತ್ರಗಳು ಮತ್ತು ಪಕ್ಷದ ವ್ಯವಹಾರಗಳನ್ನು ನಿರ್ವಹಿಸುವುದಕ್ಕೆ ವಿಶೇಷ ದಕ್ಷಿಣ ಭಾರತದಲ್ಲಿ ಹೆಸರುವಾಸಿಯಾಗಿದ್ದಾರೆ,

ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸುವ ಮಹಿಳಾ ನಾಯಕಿಯೊಬ್ಬರ ಹೆಸರು ಕೂಡ ಸಂಭಾವ್ಯ ಅಭ್ಯರ್ಥಿಯಾಗಿ ಚಲಾವಣೆಯಲ್ಲಿದೆ. ಇತರ ಪ್ರಮುಖ ಹೆಸರುಗಳಲ್ಲಿ ಅರುಣ್ ಸಿಂಗ್ ಮತ್ತು ತರುಣ್ ಚುಗ್ (ಇಬ್ಬರೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು), ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಇಬ್ಬರ ನಂಬಿಕಸ್ಥರಾಗಿರುವ ಡಾ. ಸುಧಾ ಯಾದವ್ ಅಧ್ಯಕ್ಷ ಸ್ಥಾನಕ್ಕೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com