'ಪೌರತ್ವ ನಿಮ್ಮ ಕಾರ್ಯವ್ಯಾಪ್ತಿಯಲ್ಲ, ಮತದಾರರ ಪಟ್ಟಿ ಪರಿಷ್ಕರಣೆಯತ್ತ ಗಮನಹರಿಸಿ': ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತ ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್‌ಗಳನ್ನು ಹೊರಗಿಡುವ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಪೀಠ ಕಳವಳ ವ್ಯಕ್ತಪಡಿಸಿದೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಾರಂಭಿಸಿದೆ.

ಚುನಾವಣಾ ಆಯೋಗದ ಕ್ರಮವನ್ನು ಟೀಕಿಸಿರುವ ಸುಪ್ರೀಂ ಕೋರ್ಟ್, ಮತದಾರ ಪಟ್ಟಿಗಳ ವಿಶೇಷ ಪರಿಷ್ಕರಣೆಯ ಸಮಯದಲ್ಲಿ ನೀವು ಪೌರತ್ವದ ವಿಷಯವನ್ನು ಏಕೆ ತೆಗೆದುಕೊಂಡಿದ್ದೀರಿ, ಅದು ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತದೆಯೇ ಹೊರತು ಚುನಾವಣಾ ಆಯೋಗದ ಅಡಿಯಲ್ಲ ಎಂದು ಹೇಳಿದೆ.

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತ ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್‌ಗಳನ್ನು ಹೊರಗಿಡುವ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಪೀಠ ಕಳವಳ ವ್ಯಕ್ತಪಡಿಸಿದೆ. ದೇಶದ ನಾಗರಿಕರ ಗುರುತಿನ ಪುರಾವೆಯಾಗಿ ಆಧಾರ್ ನ್ನು ದೇಶಾದ್ಯಂತ ಬಳಸಲಾಗುತ್ತಿರುವುದರಿಂದ ಅದನ್ನು ಏಕೆ ಪರಿಗಣಿಸಲಾಗಿಲ್ಲ ಎಂಬುದರ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

Supreme court
ಬಿಹಾರ ವಿಧಾನಸಭೆ ಚುನಾವಣೆ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಅಸಮಾಧಾನ; ಬಿಜೆಪಿಗೆ ಹಿನ್ನಡೆ

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಹಲವು ವಿರೋಧ ಪಕ್ಷದ ಸಂಸದರು ಸೇರಿದಂತೆ 10 ಕ್ಕೂ ಹೆಚ್ಚು ಅರ್ಜಿಗಳು ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸಲು ಒತ್ತಾಯಿಸಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪಣೆಗಳಿವೆ, ಪರಿಷ್ಕರಣೆಯನ್ನು ಸಂವಿಧಾನಕ್ಕೆ ಅನುಗುಣವಾಗಿ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸಿದೆ.

ಕೊನೆಯ ಬಾರಿಗೆ ಇಂತಹ ಸಮಗ್ರ ಪರಿಷ್ಕರಣೆ ನಡೆಸಿದ್ದು, 2003 ರಲ್ಲಿ. ಪ್ರಸ್ತುತ ನವೀಕರಣವು ಸಕಾಲಿಕ ಮತ್ತು ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ಒತ್ತಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com