ಶಿಂಧೆ ಶಿವಸೇನಾ ಸಚಿವ ಸಂಜಯ್ ಶಿರ್ಸಾತ್‌ಗೆ IT ನೋಟಿಸ್

ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.
Sanjay Shirsat
ಸಂಜಯ್ ಶಿರ್ಸಾತ್‌ ANI Photo
Updated on

ಮುಂಬೈ: 2019 ಮತ್ತು 2024 ರ ವಿಧಾನಸಭಾ ಚುನಾವಣೆಗಳ ನಡುವೆ ತಮ್ಮ ಆಸ್ತಿಯಲ್ಲಿನ ಹೆಚ್ಚಳದ ಬಗ್ಗೆ ವಿವರಣೆ ಕೋರಿ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಚಿವ ಸಂಜಯ್ ಶಿರ್ಸಾತ್ ಗುರುವಾರ ಹೇಳಿದ್ದಾರೆ.

ಇಂದು ಶಾಸಕಾಂಗ ಸಂಕೀರ್ಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಔರಂಗಾಬಾದ್(ಪಶ್ಚಿಮ) ಶಾಸಕ ಶಿರ್ಸಾತ್‌, ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.

ಆದರೆ ನಂತರ ತಮ್ಮನ್ನು ತಾವು ಸರಿಪಡಿಸಿಕೊಂಡ ಶಿರ್ಸಾತ್‌ ಅವರು, ಶ್ರೀಕಾಂತ್ ಶಿಂಧೆ ಅವರಿಗೆ ಯಾವುದೇ ಐಟಿ ನೋಟಿಸ್ ಬಂದಿರುವ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಉಲ್ಟಾ ಹೊಡೆದರು.

Sanjay Shirsat
ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್‌ ನಡೆಸುತ್ತಾರೆ, ಅವರಿಗೆ ಆಹಾರ ಪೂರೈಕೆ ಗುತ್ತಿಗೆ ನೀಡಬಾರದು: ಶಿವಸೇನೆ ಶಾಸಕ

"ಕೆಲವರು ನನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರು. ಅದರ ಆಧಾರದ ಮೇಲೆ ನನಗೆ ನೋಟಿಸ್ ನೀಡಲಾಗಿದೆ. ನಾನು ಬುಧವಾರ ನೋಟಿಸ್ ಗೆ ಪ್ರತಿಕ್ರಿಯಿಸಬೇಕಿತ್ತು, ಆದರೆ ಹೆಚ್ಚಿನ ಸಮಯ ಕೇಳಿದ್ದೇನೆ ಎಂದರು.

ನಾನು ಯಾವುದೇ ತಪ್ಪು ಮಾಡಿಲ್ಲ. ನೋಟಿಸ್ ಸರಿಯಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ವರದಿಗಾರರಿಗೆ ಶಿರ್ಸಾತ್ ತಿಳಿಸಿದರು.

ಎರಡು ವಿಧಾನಸಭೆ ಚುನಾವಣೆಗಳ ನಡುವೆ ತಮ್ಮ ಘೋಷಿತ ಆಸ್ತಿಯಲ್ಲಿನ ಏರಿಕೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com