ಛತ್ತೀಸ್‌ಗಢ: 37.5 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 22 ನಕ್ಸಲೀಯರ ಶರಣಾಗತಿ!

ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಛತ್ತೀಸ್‌ಗಢ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ 22 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ. ಇವರಿಗೆ ರೂ. 37.5 ಲಕ್ಷ ಬಹಮಾನ ಘೋಷಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳ ಮಾದ್ ವಿಭಾಗದ ಕುತುಲ್, ನೆಲ್ನಾರ್ ಮತ್ತು ಇಂದ್ರಾವತಿ ಪ್ರದೇಶ ಸಮಿತಿಗಳಿಗೆ ಸೇರಿದ ನಕ್ಸಲೀಯರು ಹಿರಿಯ ಪೊಲೀಸ್, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಐಟಿಬಿಪಿ ಅಧಿಕಾರಿಗಳ ಮುಂದೆ ನಾರಾಯಣಪುರದಲ್ಲಿ ಶರಣಾದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ತಿಳಿಸಿದ್ದಾರೆ.

ಕ್ಷೀಪ್ರಗತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಮಾದ್ ಪ್ರದೇಶದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಸಹಜ ಜೀವನ ನಡೆಸಲು ಬಯಸಿದ್ದರು. ಈ ಎಲ್ಲಾ 22 ನಕ್ಸಲೀಯರಿಗೆ ಒಟ್ಟು ರೂ. 37.5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅವರು ವಿವರ ನೀಡಿದ್ದಾರೆ.

ನಕ್ಸಲೀಯರ ಶರಣಾಗತಿಯಲ್ಲಿ ಜಿಲ್ಲಾ ಪೊಲೀಸರು, ಮೀಸಲು ದಳ, ಐಟಿಬಿಪಿ ಮತ್ತು ಬಿಎಸ್ ಎಫ್ ಪ್ರಮುಖ ಪಾತ್ರ ವಹಿಸಿದೆ. ಇದರಿಂದ ನಕ್ಸಲ್ ಮುಕ್ತ ಸಂಕಲ್ಪ ಈಡೇರುವ ಕಾಲ ಹತ್ತಿರವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Casual Images
ಛತ್ತೀಸ್ ಗಢ: ತಲೆಗೆ 24 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 9 ಮಂದಿ ಸೇರಿ 17 ನಕ್ಸಲೀಯರ ಶರಣಾಗತಿ!

ಶರಣಾದ ಎಲ್ಲಾ ನಕ್ಸಲೀಯರಿಗೂ ರೂ. 50,000 ಆರ್ಥಿಕ ನೆರವನ್ನು ಒದಗಿಸಲಾಗುವುದು. ಇದರೊಂದಿಗೆ ಈ ವರ್ಷ ಇಲ್ಲಿಯವರೆಗೂ 132 ನಕ್ಸಲೀಯರು ಶರಣಾಗಿದ್ದಾರೆ ಎಂದು ಗುರಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com