ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಟೀಕಿಸಿದ ಮಾಜಿ ಕಾನೂನು ಸಚಿವರಾಗಿರುವ ಕಪಿಲ್ ಸಿಬಲ್, ಚುನಾವಣಾ ಆಯೋಗವು (EC) ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಹೇಳಿದರು.
Kapil Sibal
ಕಪಿಲ್ ಸಿಬಲ್
Updated on

ನವದೆಹಲಿ: ಚುನಾವಣಾ ಆಯೋಗವು ಯಾವಾಗಲೂ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ "ಕೈಗೊಂಬೆ"ಯಾಗಿದೆ ಎಂದು ರಾಜ್ಯಸಭಾ ಸಂಸದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಚುನಾವಣಾ ಸಂಸ್ಥೆಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ನೋಡಿಕೊಳ್ಳುವ ಗುರಿಯನ್ನು ಹೊಂದಿರುವ "ಅಸಂವಿಧಾನಿಕ" ಕ್ರಮವಾಗಿದೆ ಎಂದು ಟೀಕಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕಪಿಲ್ ಸಿಬಲ್, ಪ್ರತಿಯೊಬ್ಬ ಚುನಾವಣಾ ಆಯುಕ್ತರು ತಮ್ಮ ಈ ಸರ್ಕಾರದೊಂದಿಗೆ ಹೊಂದಾಣಿಕೆಯಲ್ಲಿ ಹಿಂದಿನದನ್ನು ಮೀರಿಸುತ್ತಾರೆ ಎಂದು ಸಿಬಲ್ ಆರೋಪಿಸಿದ್ದಾರೆ.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಟೀಕಿಸಿದ ಮಾಜಿ ಕಾನೂನು ಸಚಿವರಾಗಿರುವ ಕಪಿಲ್ ಸಿಬಲ್, ಚುನಾವಣಾ ಆಯೋಗವು (EC) ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಹೇಳಿದರು.

Kapil Sibal
ಬಿಹಾರ ವಿಧಾನಸಭೆ ಚುನಾವಣೆ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಅಸಮಾಧಾನ; ಬಿಜೆಪಿಗೆ ಹಿನ್ನಡೆ

22 ವರ್ಷಗಳ ನಂತರ ನಡೆಯುತ್ತಿರುವ ಪರಿಷ್ಕರಣೆಯು ಅನರ್ಹ ಮತದಾರರ ಪಟ್ಟಿಯನ್ನು ಶುದ್ಧೀಕರಿಸುತ್ತದೆ, ನಮೂದುಗಳನ್ನು ನಕಲು ಮಾಡುತ್ತದೆ ಮತ್ತು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರನ್ನು ಸೇರಿಸುತ್ತದೆ ಎಂದು ಚುನಾವಣಾ ಆಯೋಗ ಸಮರ್ಥಿಸಿಕೊಂಡಿದೆ.

ಎಸ್ ಐಆರ್ ಕುರಿತು ಚುನಾವಣಾ ಆಯೋಗ ಮೇಲೆ ವಿರೋಧ ಪಕ್ಷದ ವಾಗ್ದಾಳಿ ಬಗ್ಗೆ ಕೇಳಿದಾಗ, ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಯಾವಾಗಲೂ ಸರ್ಕಾರದ ಕೈಯಲ್ಲಿ ಕೈಗೊಂಬೆಯಾಗಿದೆ, ಚುನಾವಣಾ ಆಯೋಗದ ನಡವಳಿಕೆ, ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಉತ್ತಮ ಎಂದು ಹೇಳಿದರು.

Kapil Sibal
'ಸಾಂವಿಧಾನಿಕ ಸಂಸ್ಥೆಯನ್ನು ತಡೆಯಲು ಸಾಧ್ಯವಿಲ್ಲ': Bihar ನಲ್ಲಿ ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಅನುಮತಿ

ವಾಸ್ತವವಾಗಿ, ಪ್ರತಿಯೊಬ್ಬ ಚುನಾವಣಾ ಆಯುಕ್ತರು ಈ ಸರ್ಕಾರದೊಂದಿಗೆ ತಮ್ಮ ಹೊಂದಾಣಿಕೆಯಲ್ಲಿ ಹಿಂದಿನದನ್ನು ಮೀರಿಸುತ್ತಾರೆ, ಇದು ಸಂಪೂರ್ಣವಾಗಿ ಸಂವಿಧಾನಬಾಹಿರ ಪ್ರಕ್ರಿಯೆ. ಪೌರತ್ವದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ಆಯೋಗಕ್ಕೆ ಇಲ್ಲ ಎಂದರು.

ಬಿಜೆಪಿಯವರು ಚುನಾವಣೆಗಳನ್ನು ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯ ಈ ಸಂಪೂರ್ಣ ನಿರ್ದಿಷ್ಟ ಪ್ರಕ್ರಿಯೆಯು ಮುಂಬರುವ ಎಲ್ಲಾ ಕಾಲಕ್ಕೂ ಬಹುಮತದ ಸರ್ಕಾರಗಳನ್ನು ಅಧಿಕಾರದಲ್ಲಿರಿಸಲು ಒಂದು ಪ್ರಕ್ರಿಯೆಯಾಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com