ತೀವ್ರ ಸೋಂಕು: CJI BR Gavai ಆಸ್ಪತ್ರೆಗೆ ದಾಖಲು!

ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು.
CJI B R Gavai hospitalised after severe infection
ಸಿಜೆಐ ಬಿಆರ್ ಗವಾಯಿ
Updated on

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ತೀವ್ರ ಸೋಂಕಿಗೆ ತುತ್ತಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು. ಇದೀಗ ಅವರು ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸೋಮವಾರ ಅಧಿಕೃತ ಮೂಲವೊಂದು ತಿಳಿಸಿದೆ.

ಸಿಜೆಐ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಿ ಕರ್ತವ್ಯಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಅದು ತಿಳಿಸಿದೆ.

CJI B R Gavai hospitalised after severe infection
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಜುಲೈ 12 ರಂದು ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಲು ಸಿಜೆಐ ಹೈದರಾಬಾದ್‌ ಗೆ ತೆರಳಿದ್ದರು.

ಅದೇ ದಿನ ಸಿಜೆಐ ಗವಾಯಿ ಅವರು "ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಸಂವಿಧಾನ ಸಭೆಯ ಸಂವಿಧಾನ" ಎಂಬ ಶೀರ್ಷಿಕೆಯ ವಿಶೇಷ ಅಂಚೆ ಕವರ್ ಮತ್ತು "ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ" ಕುರಿತು ಚಿತ್ರ ಪೋಸ್ಟ್‌ಕಾರ್ಡ್‌ಗಳ ಸೆಟ್ ಅನ್ನು ಹೈದರಾಬಾದ್‌ನಲ್ಲಿ ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com