ಕಾಂಗ್ರೆಸ್ ನಿಂದ ಓಡಿಹೋದ ವ್ಯಕ್ತಿಯೇ ಈಗ ಅಸ್ಸಾಂ ಮುಖ್ಯಮಂತ್ರಿ: ಹಿಮಂತ ವಿರುದ್ಧ ಖರ್ಗೆ ವಾಗ್ದಾಳಿ

2015 ರಲ್ಲಿ ಬಿಜೆಪಿ ಸೇರುವ ಮೊದಲು ಹಿಮಂತ ಶರ್ಮಾ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.
Mallikarjuna Kharge
ಮಲ್ಲಿಕಾರ್ಜುನ ಖರ್ಗೆ
Updated on

ಚಾಯ್ಗಾಂವ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ನಮ್ಮ ಪಕ್ಷದ ಸದಸ್ಯರಿಗೆ ಅವಕಾಶ ನೀಡಬೇಕಾಯಿತು ಎಂದು ಹೇಳಿದ್ದಾರೆ.

ಒಂದು ದಿನ ಅಸ್ಸಾಂ ಪ್ರವಾಸದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು, "ಕಾಂಗ್ರೆಸ್ ಪಕ್ಷದಿಂದ ಓಡಿಹೋದ ವ್ಯಕ್ತಿಯೇ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ" ಎಂದರು.

2015 ರಲ್ಲಿ ಬಿಜೆಪಿ ಸೇರುವ ಮೊದಲು ಹಿಮಂತ ಶರ್ಮಾ ಅಸ್ಸಾಂನಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಖರ್ಗೆ, "ಜನರಿಗೆ ಅನ್ಯಾಯ ಮಾಡಿದವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಹೀಗಾಗಿ ಅವರು ಈಗ ಜೈಲುಗಳನ್ನು ದುರಸ್ತಿ ಮಾಡುತ್ತಿದ್ದಾರೆ. ಏಕೆಂದರೆ ಅವರು ಅಲ್ಲೇ ಇರಬೇಕಾಗುತ್ತದೆ" ಎಂದು ಟೀಕಿಸಿದರು.

Mallikarjuna Kharge
'ಹೆದರಬೇಡಿ' ಎಂದು ಅಸ್ಸಾಂ ಜನತೆಗೆ ಸಂದೇಶ ನೀಡಲು ಖರ್ಗೆ, ರಾಹುಲ್ ಇಲ್ಲಿಗೆ ಬರುತ್ತಿದ್ದಾರೆ: ಗೌರವ್ ಗೊಗೊಯ್

ಅಸ್ಸಾಂನಲ್ಲಿ ಜನರನ್ನು "ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ನೆಪದಲ್ಲಿ" ಬೆದರಿಕೆ ಹಾಕಲಾಗುತ್ತಿದೆ ಮತ್ತು ಮುಂದಿನ ವರ್ಷದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜನ ಪಾಠ ಕಲಿಸಲಿದ್ದಾರೆ ಎಂದರು.

ಅಸ್ಸಾಂನಲ್ಲಿ ನಡೆದ ತೆರವು ಕಾರ್ಯಾಚರಣೆಗಳ ಕುರಿತು ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸರ್ಕಾರ ರಚಿಸಿದರೆ, ಮನೆಗಳನ್ನು ಪುನರ್ನಿರ್ಮಿಸಲಾಗುವುದು ಮತ್ತು ಬಿಜೆಪಿ ಸರ್ಕಾರದ ಇಂತಹ ಕ್ರಮದಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮಕ್ಕಳಿಗೆ ಶಿಕ್ಷಣ, ಅಸ್ಸಾಂನಲ್ಲಿ ಯುವಕರಿಗೆ ಉದ್ಯೋಗ ಮತ್ತು ಚಹಾ ತೋಟದ ಕೆಲಸಗಾರರಿಗೆ ಗರಿಷ್ಠ ವೇತನವನ್ನು ಖಾತರಿಪಡಿಸುತ್ತದೆ ಎಂದು ಖರ್ಗೆ ಹೇಳಿದರು.

ದಲಿತರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಕೇಂದ್ರದ ಬಿಜೆಪಿ ಸರ್ಕಾರವು ನಿಮ್ಮ ಮೀಸಲಾತಿಯನ್ನು "ಕಿತ್ತುಕೊಳ್ಳುತ್ತದೆ" ಎಂದು ಖರ್ಗೆ ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com