ಭೂಕಬಳಿಕೆ ಪ್ರಕರಣ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ

ಬಿಡದಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರು ದೊಡ್ಡ ಪ್ರಮಾಣದ ಭೂ ಅತಿಕ್ರಮಣ ಮಾಡಿದ್ದಾರೆ ಎಂದು NGO ಆರೋಪಿಸಿದೆ.
HD Kumaraswamy
ಎಚ್‌ಡಿ ಕುಮಾರಸ್ವಾಮಿonline desk
Updated on

ಕರ್ನಾಟಕದ ಗ್ರಾಮವೊಂದರಲ್ಲಿ ನಡೆದಿರುವ ಬೃಹತ್ ಪ್ರಮಾಣದ ಭೂ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಕ್ರಮ ಜರುಗಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.

ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 17 ರ ಆದೇಶದ ವಿರುದ್ಧ ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಪ್ರಸನ್ನ ಬಿ ವರಾಳೆ ಅವರನ್ನೊಳಗೊಂಡ ಪೀಠ, ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುತ್ತಿರುವ "ಸಮಾಜ ಪರಿವರ್ತನ ಸಮುದಾಯ" ಎಂಬ ಸರ್ಕಾರೇತರ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಬಿಡದಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರು ದೊಡ್ಡ ಪ್ರಮಾಣದ ಭೂ ಅತಿಕ್ರಮಣ ಮಾಡಿದ್ದಾರೆ ಎಂದು NGO ಆರೋಪಿಸಿದೆ.

ಜನವರಿ 14, 2020 ರಂದು ವಿಭಾಗೀಯ ಪೀಠ ನೀಡಿದ ಆದೇಶವನ್ನು ಪಾಲಿಸದ ಆರೋಪದ ಮೇಲೆ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ವಿಚಾರಣೆ ಬಾಕಿ ಇದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

"ಆಗಸ್ಟ್ 5, 2014 ರಂದು ಕರ್ನಾಟಕ ಲೋಕಾಯುಕ್ತ ಹೊರಡಿಸಿದ ಆದೇಶವನ್ನು ಮೂರು ವಾರಗಳ ಅವಧಿಯಲ್ಲಿ ರಾಜ್ಯ ಪಾಲಿಸುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿದ ಹೇಳಿಕೆಯ ಆಧಾರದ ಮೇಲೆ ಹೈಕೋರ್ಟ್ ರಿಟ್ ಅರ್ಜಿಯಲ್ಲಿ ಮೇಲಿನ ಆದೇಶವನ್ನು ಅಂಗೀಕರಿಸಿದೆ" ಎಂದು ಹೇಳಿದೆ.

HD Kumaraswamy
ಹೈಕೋರ್ಟ್ ಆದೇಶ: ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ

ಲೋಕಾಯುಕ್ತದ ಆದೇಶ ವಿವರವಾದದ್ದು ಆದರೆ ಮಧ್ಯಂತರ ಸ್ವರೂಪದ್ದಾಗಿತ್ತು ಮತ್ತು ನಂತರ, ಲೋಕಾಯುಕ್ತವು ಅಂತಿಮವಾಗಿ ಮಾರ್ಚ್ 3, 2021 ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿತು ಎಂದು ಪೀಠ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com