Devendra Fadnavis
ದೇವೇಂದ್ರ ಫಡ್ನವೀಸ್TNIE

ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಿದ ಮಹಾರಾಷ್ಟ್ರ ಸರ್ಕಾರ

ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.
Published on

ಸಾಂಗ್ಲಿ: ಮಹಾರಾಷ್ಟ್ರ ಸರ್ಕಾರ, ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಶುಕ್ರವಾರ ಘೋಷಿಸಿದೆ.

ಮಳೆಗಾಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಈ ಘೋಷಣೆ ಮಾಡಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಸಂಪುಟದ ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಿದೆ ಎಂದು ಅವರು ಹೇಳಿದರು.

Devendra Fadnavis
ಗಣೇಶೋತ್ಸವ 'ಮಹಾರಾಷ್ಟ್ರ ರಾಜ್ಯದ ಹಬ್ಬ' ಎಂದು ಸರ್ಕಾರ ಘೋಷಣೆ

ಹಿಂದೂತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರ ಹೆಸರನ್ನು ಈಶ್ವರಪುರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಕಲೆಕ್ಟರೇಟ್‌ಗೆ ಮನವಿ ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಹೆಸರು ಬದಲಾವಣೆಯ ಬೇಡಿಕೆ 1986 ರಿಂದ ಬಾಕಿ ಇತ್ತು ಎಂದು ಇಸ್ಲಾಂಪುರದ ಶಿವಸೇನಾ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com