"ಅನಿರೀಕ್ಷಿತ ಭೇಟಿ" ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗಳಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನ್ಕರ್..!

ಸಂವಿಧಾನಾತ್ಮಕ ಹುದ್ದೆ ಹೊಂದಿದ್ದ ಜಗದೀಪ್ ಧನಕರ್ ಅವರು, ಸಮಯ ನಿಗದಿಪಡಿಸಿಕೊಳ್ಳದೇ ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಮೂಡಿಸಿದೆ.
ಜಗದೀಪ್ ಧನಕರ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು.
ಜಗದೀಪ್ ಧನಕರ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು.
Updated on

ನವದೆಹಲಿ: ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೂ ತಬ್ಬಿಬ್ಬಾಗುವಂತೆ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಜಗದೀಪ್ ಧನಕರ್ ಅವರು ಸಮಯ ನಿಗದಿ ಮಾಡಿಕೊಳ್ಳದೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಧಾವಿಸಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.

ಸಮಯ ನಿಗದಿಪಡಿಸಿಕೊಳ್ಳದೇ ಸಂವಿಧಾನಾತ್ಮಕ ಹುದ್ದೆ ಹೊಂದಿದ್ದ ಜಗದೀಪ್ ಧನಕರ್ ಅವರು, ರಾತ್ರಿ 9 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಈ ವಿಚಾರ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲ ಮೂಡಿಸಿದೆ.

ಜಗದೀಪ್ ಧನಕರ್ ಅವರ ಅನಿರೀಕ್ಷಿತ ಭೇಟಿಯಿಂದ ಅಚ್ಚರಿಕೊಂಡ ರಾಷ್ಟ್ರಪತಿ ಭವನದ ಸಿಬ್ಬಂದಿಗಳು ಕೂಡಲೇ ತಕ್ಷಣ ಮಿಲಿಟರಿ ಕಾರ್ಯದರ್ಶಿಯವರ ಬಳಿಗೆ ತೆರಳಿ ಆವರಣಕ್ಕೆ ಧನಕರ್ ಆಗಮಿಸಿದ ಸುದ್ದಿ ಮುಟ್ಟಿಸಿದ್ದಾರೆ.

ರಾಷ್ಟ್ರಪತಿ ಜೊತೆಗೆ ತರಾತುರಿಯ ಭೇಟಿ ನಿಗದಿಪಡಿಸಿದ ಬಳಿಕ ಧನಕರ್ ಅವರು, ಸಂವಿಧಾನಾತ್ಮಕ ಅಗತ್ಯತೆಯಂತೆ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ರಾತ್ರಿ 9.25ಕ್ಕೆ ಈ ಬೆಳವಣಿಗೆಯನ್ನು ಪ್ರಕಟಿಸಿದರು.

ತಡರಾತ್ರಿಯ ಈ ಬೆಳವಣಿಯ ಬಗ್ಗೆ ಯಾವುದೇ ಸುಳಿವು ಕೂಡಾ ಹೊಂದಿರದೇ ಇದ್ದುದನ್ನು ನೋಡಿದರೆ ಅವರ ರಾಜೀನಾಮೆಗೆ ದಿಢೀರ್ ಬೆಳವಣಿಗೆಯೊಂದು ಕಾರಣವಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸುತ್ತಿದೆ.

ಜಗದೀಪ್ ಧನಕರ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ: ತಕ್ಷಣದಿಂದ ಜಾರಿಗೆ- ಕೇಂದ್ರ ಸರ್ಕಾರ

ಧನಕರ್ ರಾಜೀನಾಮೆ ಬಗ್ಗೆ ಗೃಹ ಸಚಿವಾಲಯ ಅಧಿಕೃತ ಹೇಳಿಕೆಯನ್ನು ಮಂಗಳವಾರ ಅಧಿಸೂಚನೆ ಮೂಲಕ ಪ್ರಕಟಿಸಿದ್ದು, ಗೆಜೆಟ್ ಅಧಿಸೂಚನೆಗೆ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಸಹಿ ಮಾಡಿದ್ದಾರೆ.

ಮತ್ತೊಂದು ಬೆಳವಣಿಗೆಯಲ್ಲಿ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ ಅವರು ರಾಷ್ಟ್ರಪತಿ ಭವನಕ್ಕೆ ಮಂಗಳವಾರ ಭೇಟಿ ನೀಡಿದ್ದರು. ರಾಜ್ಯಸಭೆಯ ಬೆಳಿಗ್ಗೆಯ ಕಲಾಪದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.

ಜಗದೀಪ್ ಧನಕರ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದರು.

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆಂದು ಎಂದು ಪತ್ರದಲ್ಲಿ ತಿಳಿಸಿದ್ದರು.

ನಾನು ನನ್ನ ಆರೋಗ್ಯ ರಕ್ಷಣೆಯತ್ತ ಗಮನ ಹರಿಸಲು ಬಯಸುತ್ತೇನೆ. ಈ ನಿಟ್ಟಿನಲ್ಲಿ, ವೈದ್ಯರ ಸಲಹೆಯ ಮೇರೆಗೆ ನಾನು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನದ 67(ಎ) ವಿಧಿಯ ಪ್ರಕಾರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ನನ್ನ ನಿರ್ಧಾರ ತಕ್ಷಣವೇ ಜಾರಿಗೆ ಬರಲಿದೆ. ಉಪರಾಷ್ಟ್ರಪತಿ ಹುದ್ದೆಯ ಜವಾಬ್ದಾರಿಗಳನ್ನು ಪೂರೈಸುವ ಅವಧಿಯಲ್ಲಿ ಸಂಪೂರ್ಣ ಬೆಂಬಲ ನೀಡಿದ್ದಕ್ಕಾಗಿ ಅಧ್ಯಕ್ಷ ಮುರ್ಮು, ಪ್ರಧಾನಿ ಮೋದಿ, ಕೇಂದ್ರ ಸಚಿವರು ಮತ್ತು ಎಲ್ಲಾ ಸಂಸತ್ ಸದಸ್ಯರಿಗೆ ನಾನು ಕೃತಜ್ಞನಾಗಿದ್ದೇನೆ.

ಜಗದೀಪ್ ಧನಕರ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು.
'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video

ನಿಮ್ಮೆಲ್ಲರಿಂದ ನನಗೆ ದೊರೆತ ಅಮೂಲ್ಯ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಉಪರಾಷ್ಟ್ರಪತಿಯಾಗಿದ್ದ ವರ್ಷಗಳಲ್ಲಿ ಅನೇಕ ಅಮೂಲ್ಯ ವಿಷಯಗಳನ್ನು ಕಲಿತಿದ್ದೇನೆ. ನಾನು ಅನೇಕ ಜೀವನ ಅನುಭವಗಳನ್ನು ಗಳಿಸಿದ್ದೇನೆ. ಉಪರಾಷ್ಟ್ರಪತಿಯಾಗಿ, ಇಂತಹ ಪರಿವರ್ತನಾ ಸಮಯದಲ್ಲಿ ದೇಶದ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿಯನ್ನು ಗಮನಿಸಿದ್ದೇನೆ. ಈ ಅವಕಾಶವನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ. ಇದು ನನಗೆ ಹೆಚ್ಚಿನ ತೃಪ್ತಿಯನ್ನು ನೀಡುತ್ತದೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು.

ಈ ರಾಜೀನಾಮೆಯೊಂದಿಗೆ ಅಧಿಕಾರದಲ್ಲಿರುವಾಗ ರಾಜೀನಾಮೆ ನೀಡಿದ ಮೂರನೇ ಉಪರಾಷ್ಟ್ರಪತಿಯಾಗಿ ಧನಕರ್​ ದಾಖಲೆ ಪುಸ್ತಕಗಳಲ್ಲಿ ದಾಖಲಾಗಿದ್ದಾರೆ.

ಈ ಹಿಂದೆ, ವಿವಿ ಗಿರಿ ಮತ್ತು ಆರ್. ವೆಂಕಟರಾಮನ್ ಇದೇ ರೀತಿಯ ರಾಜೀನಾಮೆಗಳನ್ನು ಸಲ್ಲಿಸಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರೂ ರಾಜೀನಾಮೆ ನೀಡಿದ್ದರು. ಆದರೆ, ಅನಾರೋಗ್ಯದ ಕಾರಣ ಧನಕರ್​ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com