SIR ಖಂಡಿಸಿ ಬಿಹಾರ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು RJD ಮುಂದು!

ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.
RJD leader Tejashwi Yadav
ತೇಜಸ್ವಿ ಯಾದವ್
Updated on

ಪಾಟ್ನಾ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಖಂಡಿಸಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದು ನಮ್ಮ ಮುಂದಿನ ಆಯ್ಕೆಯಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗುರುವಾರ ಹೇಳಿದ್ದಾರೆ.

ಮಳೆಗಾಲದ ಅಧಿವೇಶನದ ಕೊನೆಯ ದಿನದಂದು ರಾಜ್ಯ ವಿಧಾನಸಭೆಯ ಹೊರಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು, ಚುನಾವಣಾ ಆಯೋಗವು ಸರ್ಕಾರದ "ರಾಜಕೀಯ ಸಾಧನ" ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಚುನಾವಣಾ ಆಯೋಗವು ಉದ್ದೇಶಪೂರ್ವಕವಾಗಿಯೇ ಪ್ರತಿಪಕ್ಷವನ್ನು, ವಿಶೇಷವಾಗಿ ರಾಷ್ಟ್ರೀಯ ಜನತಾ ದಳವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಆರ್ ಜೆಡಿ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

RJD leader Tejashwi Yadav
ಜಗದೀಪ್ ಧನ್ಕರ್ ರಾಜೀನಾಮೆ ಬಿಹಾರದಿಂದ ಸಿಎಂ ನಿತೀಶ್ ಕುಮಾರ್‌ರನ್ನು ದೂರವಿಡುವ ಹುನ್ನಾರ: RJD

ವಿಶೇಷ ಸಮಗ್ರ ಮತ ಪರಿಷ್ಕರಣೆ ಅನ್ನೋದು ಪಿತೂರಿ. ಸಾಂಪ್ರದಾಯಿಕ ರಾಷ್ಟ್ರೀಯ ಜನತಾ ದಳದ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಹೀಗೆ ಮಾಡುವ ಮೂಲಕ ಭಾರತೀಯ ಚುನಾವಣಾ ಆಯೋಗವು ಆಡಳಿ­ತಾ­ರೂಢ ಪಕ್ಷದ ಅಣತಿಯಂತೆ ಕಾರ್ಯ­ನಿರ್ವಹಿಸುತ್ತಿದೆ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಅಧಿವೇಶನದಲ್ಲಿಯೂ ಚರ್ಚಿಸಲಾಗಿದೆ. ನಮ್ಮ ಮತದಾರರನ್ನು ಗುರಿಯಾಗಿಸಿಕೊಂಡು ಆಯೋಗವು ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದ್ದು, ಇದನ್ನೆಲ್ಲ ನೋಡಿದರೆ ಚುನಾವಣೆ ನಡೆಸುವುದೇ ಅರ್ಥ­­ಹೀನ ಎಂದು ಅನ್ನಿಸುತ್ತದೆ ಎಂದು ತೇಜಸ್ವಿ ಯಾದವ್‌ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com