OP MAHADEV: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ

ಹತ್ಯೆಗೊಳಗಾದ ಭಯೋತ್ಪಾದಕರ ಗುರುತು ಮತ್ತು ಗುಂಪನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.
Representational image
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು- ಕಾಶ್ಮೀರದ ಡಚಿಗಮ್ ಬಳಿಯ ಹರ್ವಾನ್ ಅರಣ್ಯದಲ್ಲಿ ಸೋಮವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಅಪರಿಚಿತ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಹತ್ಯೆಗೊಳಗಾದ ಭಯೋತ್ಪಾದಕರ ಗುರುತು ಮತ್ತು ಗುಂಪನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯ ರೂವಾರಿಗಳನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಕಳೆದ ಒಂದು ತಿಂಗಳಿನಿಂದ ಗುಪ್ತಚರ ಮಾಹಿತಿಯು ಭಯೋತ್ಪಾದಕರು ಶ್ರೀನಗರ ನಗರ ಕೇಂದ್ರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಡಚಿಗಮ್ ಪ್ರದೇಶದ ಕಡೆಗೆ ಸಾಗಿರಬಹುದು ಎಂದು ಸೂಚಿಸಿತ್ತು.

ಆದಾಗ್ಯೂ, ಇಂದು ಹತ್ಯೆಗೀಡಾದ ಮೂವರು ಭಯೋತ್ಪಾದಕರು ಏಪ್ರಿಲ್ 22 ರ ದಾಳಿಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಭದ್ರತಾ ಪಡೆಗಳು ಇಂದು ಬೆಳಗ್ಗೆ ಹರ್ವಾನ್‌ನ ಮುಲ್ನಾರ್ ಪ್ರದೇಶದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ನಡೆಸುತ್ತಿರುವಾಗ ದೂರದಿಂದ ಎರಡು ಸುತ್ತಿನ ಗುಂಡು ಹಾರಾಟ ಕೇಳಿಬಂದಿತು. ಪ್ರದೇಶಕ್ಕೆ ಬಲವರ್ಧನೆಗಳನ್ನು ರವಾನಿಸಲಾಗಿದ್ದು, ಶೋಧ ಕಾರ್ಯಾಚರಣೆಗಳು ತೀವ್ರಗೊಂಡು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com