ಒಡಿಶಾ: ತಪ್ಪಾದ ಇಂಜೆಕ್ಷನ್ ಗೆ ಐವರು ಬಲಿ; ತನಿಖೆಗೆ ಆದೇಶ

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು.
Reprsentational image
ಸಾಂದರ್ಭಿಕ ಚಿತ್ರ
Updated on

ಕೊರಾಪುಟ್‌: ಒಡಿಶಾದ ಕೊರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ಆಸ್ಪತ್ರೆ ಸಿಬ್ಬಂದಿ ತಪ್ಪು ಇಂಜೆಕ್ಷನ್ ನೀಡಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು. ಅವರ ಸಾವಿಗೆ ಸ್ವಲ್ಪ ಮೊದಲು ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಇಂಜೆಕ್ಷನ್ ನೀಡಿದ್ದಾರೆ ಎಂದು ಅವರ ಕುಟುಂಬಗಳು ಆರೋಪಿಸಿವೆ.

ಈ ರೋಗಿಗಳನ್ನು ಶಸ್ತ್ರಚಿಕಿತ್ಸೆಯ ನಂತರದ ಆರೈಕೆ ಮತ್ತು ಗಂಭೀರ ಮೇಲ್ವಿಚಾರಣೆಗಾಗಿ ಐಸಿಯು ಮತ್ತು ಶಸ್ತ್ರಚಿಕಿತ್ಸಾ ವಾರ್ಡ್‌ಗಳಿಗೆ ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಾವಿಗೆ ನಿಖರ ಕಾರಣ ಕಂಡುಹಿಡಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು SLNMCH ನ ಸೂಪರಿಂಟೆಂಡೆಂಟ್ ಸುಸಂತಾ ಕುಮಾರ್ ಸಾಹು ತಿಳಿಸಿದ್ದಾರೆ.

ನಾವು ಎಲ್ಲಾ ಇಲಾಖಾ ಮುಖ್ಯಸ್ಥರ ಸಭೆಯನ್ನು ಕರೆದಿದ್ದೇವೆ. ಮಂಗಳವಾರ ರಾತ್ರಿ ಸಾವನ್ನಪ್ಪಿದ ರೋಗಿಗಳನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕವಾಗಿ, ಸಾವುಗಳು ಯಾವುದೇ ತಪ್ಪುಇಂಜೆಕ್ಷನ್‌ನಿಂದ ಸಂಭವಿಸಿಲ್ಲ ಎಂದು ತೋರುತ್ತದೆ. ಆದಾಗ್ಯೂ, ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ" ಎಂದು ಅವರು ಹೇಳಿದರು. ಮೂವರು ರೋಗಿಗಳು ಐಸಿಯುನಲ್ಲಿ ಸಾವನ್ನಪ್ಪಿದರೆ, ಇಬ್ಬರು ಸಾಮಾನ್ಯ ವಾರ್ಡ್‌ನಲ್ಲಿ ಮೃತ ಪಟ್ಟಿದ್ದರು. ಮೃತರ ಕುಟುಂಬಗಳು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು, ನಂತರ ಪೊಲೀಸರನ್ನು ನಿಯೋಜಿಸಲಾಯಿತು.

Reprsentational image
ವ್ಯಾನ್ ಮೇಲೆ ಮಗುಚಿಬಿದ್ದ ಟ್ರಕ್: ಮಧ್ಯ ಪ್ರದೇಶದ ಜಬುವಾ ಜಿಲ್ಲೆಯಲ್ಲಿ 9 ಮಂದಿ ಸಾವು; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com