'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ

2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ಸಜ್ಜುಗೊಳಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ (LoP) ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅದೇ ತಂತ್ರಗಳನ್ನು ಬಿಜೆಪಿ ಪುನರಾವರ್ತಿಸಬಹುದು ಎಂದು ಎಚ್ಚರಿಸಿದ್ದಾರೆ.

2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.

ಎಕ್ಸ್‌ ಪೋಸ್ಟ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ರಾಹುಲ್ ಗಾಂಧಿ, ಪತ್ರಿಕೆಯೊಂದರಲ್ಲಿ ಪ್ರಕಟವಾದ ತಮ್ಮ ಅಭಿಪ್ರಾಯದ ಲೇಖನವನ್ನು ಹಂಚಿಕೊಂಡಿದ್ದಾರೆ, "ಚುನಾವಣೆಯನ್ನು ಹೇಗೆ ಕದಿಯುವುದು?" ಎಂಬ ಶೀರ್ಷಿಕೆಯನ್ನು ಲೇಖನಕ್ಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ದುರುಪಯೋಗಪಡಿಸಿಕೊಂಡ ನೀಲನಕ್ಷೆ" ಎಂದು ವಿವರಿಸಿದ್ದಾರೆ, ಅದನ್ನು ಹೇಗೆ ಮಾಡಲಾಗಿದೆ ಎಂದು ಅವರು ಹಂತ ಹಂತವಾಗಿ ವಿವರಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಹೇಗೆ ದುರುಪಯೋಗಪಡಿಸಿಕೊಂಡಿತು ಎಂಬುದನ್ನು ನನ್ನ ಲೇಖನವು ಹಂತ ಹಂತವಾಗಿ ತೋರಿಸುತ್ತದೆ, "ಹಂತ 1: ಚುನಾವಣಾ ಆಯೋಗದ ನೇಮಕಕ್ಕಾಗಿ ಸಮಿತಿಯನ್ನು ಪರಿಶೀಲಿಸುವುದು; ಹಂತ 2: ಪಟ್ಟಿಗೆ ನಕಲಿ ಮತದಾರರನ್ನು ಸೇರಿಸುವುದು; ಹಂತ 3: ಮತದಾರರ ಮತದಾನವನ್ನು ಹೆಚ್ಚಿಸುವುದು; ಹಂತ 4: ಬಿಜೆಪಿ ಗೆಲ್ಲಲು ಅಗತ್ಯವಿರುವ ಸ್ಥಳದಲ್ಲಿ ನಕಲಿ ಮತದಾನವಾಗುವಂತೆ ಮಾಡಿದ್ದು; ಹಂತ 5: ಪುರಾವೆಗಳನ್ನು ಮರೆಮಾಚಿದ್ದು."

ಮೋಸದಿಂದ ಪಕ್ಷವು ಚುನಾವಣೆ ಗೆಲ್ಲಬಹುದು" ಆದರೆ, ಅಂತಹ ಕ್ರಮಗಳು "ಚುನಾವಣಾ ಸಂಸ್ಥೆಗಳಿಗೆ ಹಾನಿ ಮಾಡುತ್ತವೆ ಮತ್ತು ಫಲಿತಾಂಶದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ನಾಶಮಾಡುತ್ತವೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಹಾರಾಷ್ಟ್ರದ "ಮ್ಯಾಚ್ ಫಿಕ್ಸಿಂಗ್" ಮುಂದೆ ಬಿಹಾರಕ್ಕೆ ಬರುತ್ತದೆ, ಅಲ್ಲಿ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ, ಬಿಜೆಪಿ ಸೋಲುತ್ತದೆ ಎಂದು ಗೊತ್ತಾದರೆ ಮ್ಯಾಚ್ ಫಿಕ್ಸಿಂಗ್ ಮಾಡಬಹುದು ಎಂದಿದ್ದಾರೆ. "ಮ್ಯಾಚ್ ಫಿಕ್ಸಿಂಗ್ ಚುನಾವಣೆಗಳು ಯಾವುದೇ ಪ್ರಜಾಪ್ರಭುತ್ವಕ್ಕೆ ವಿಷವಾಗಿದೆ" ಎಂದು ವಿಷಾದ ವ್ಯಕ್ತಪಡಿಸಿದರು.

2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 235 ಸ್ಥಾನಗಳನ್ನು ಗಳಿಸಿ ಭರ್ಜರಿ ಜಯ ಸಾಧಿಸಿತು. ಕೇಸರಿ ಪಕ್ಷವು 132 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಮೈತ್ರಿಕೂಟದ ಪಾಲುದಾರರಾದ ಶಿವಸೇನೆ ಮತ್ತು ಎನ್‌ಸಿಪಿ ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮಹಾಯುತಿಯ ಪ್ರಾಬಲ್ಯವನ್ನು ಬಲಪಡಿಸಿತು.

ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ದೊಡ್ಡ ಹೊಡೆತವನ್ನು ಅನುಭವಿಸಿತು, ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗಳಿಸಿತು, ಅದರ ಮಿತ್ರಪಕ್ಷಗಳಾದ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಕ್ರಮವಾಗಿ 20 ಮತ್ತು 10 ಸ್ಥಾನಗಳನ್ನು ಗೆದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com