ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ

ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.
ASP Akash Rao Giripunje
ಪೊಲೀಸ್ ಅಧಿಕಾರಿ ಆಕಾಶ್ ರಾವ್ ಗಿರೆಪುಂಜೆ
Updated on

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲೀಯರು ಇರಿಸಿದ ಸುಧಾರಿತ ಸ್ಫೋಟಕ ಸಾಧನ (IED)ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಇತರ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿಯಾಗಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕೊಂಟಾ ವಿಭಾಗ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆಯನ್ನು ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ತಿಳಿಸಿದ್ದಾರೆ.

ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ASP Akash Rao Giripunje
ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ

ASP ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಕೊಂಟಾ-ಎರ್ರಾಬೋರ್ ರಸ್ತೆಯ ದೊಂಡ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿಗೆ ಬಿಜಾಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಹತ್ಯೆಯಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಚುರುಕು ಆಗಿರುವ ನಕ್ಸಲೀಯರು ಸೋಮವಾರ ಐಇಡಿ ಸ್ಫೋಟಿಸುವ ಮೂಲಕ ಹಿರಿಯ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com