Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತು

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
Keralite nurse Ranjitha
ದುರಂತದಲ್ಲಿ ಮೃತಪಟ್ಟ ರಂಜಿತಾ
Updated on

ತಿರುವನಂತಪುರಂ: ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಕೇರಳದ ನರ್ಸ್ ಬಗ್ಗೆ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕೇರಳ ಸರ್ಕಾರಿ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪವಿತ್ರನ್ ಅವರು ಅಪಘಾತದಲ್ಲಿ ಮೃತಪಟ್ಟ ಪಟ್ಟಣಂತಿಟ್ಟದ ನರ್ಸ್ ರಂಜಿತಾ ಅವರನ್ನು ಅಪಹಾಸ್ಯ ಮಾಡಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ, ರಾಜ್ಯ ಕಂದಾಯ ಸಚಿವ ಕೆ. ರಾಜನ್, ಪವಿತ್ರನ್ ಅವರ ಹೇಳಿಕೆ "ಅವಮಾನಕರ" ಎಂದು ಟೀಕಿಸಿದ್ದರು ಮತ್ತು ಪೋಸ್ಟ್ ಅವರ ಗಮನಕ್ಕೆ ಬಂದ ತಕ್ಷಣ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

Keralite nurse Ranjitha
Air India Plane Crash: 6 ಮೃತದೇಹಗಳ ಗುರುತು ಪತ್ತೆ; ಸಂಬಂಧಿಕರಿಗೆ ಹಸ್ತಾಂತರ

ಎರಡು ಮಕ್ಕಳ ತಾಯಿಯಾಗಿರುವ ರಂಜಿತಾ ಅವರು ಯುಕೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ವಿದೇಶದಲ್ಲಿ ಕೆಲಸ ಮಾಡಿದ ನಂತರ ಈಗ ಕೇರಳ ಆರೋಗ್ಯ ಇಲಾಖೆಯಲ್ಲಿ ಅವರಿಗೆ ಕೆಲಸ ಸಿಕ್ಕಿತ್ತು. ಸರ್ಕಾರಿ ಸೇವೆಗೆ ಸೇರಲು ತಮ್ಮ ಕೆಲಸಕ್ಕೆ ಸಂಬಂಧಿಸಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಕೇರಳಕ್ಕೆ ಬಂದಿದ್ದರು. ಆದರೆ ಯುಕೆ ಆಸ್ಪತ್ರೆಯಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪೂರ್ಣಗೊಳಿಸಲು ಪತನವಾದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

ಏತನ್ಮಧ್ಯೆ, ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪತ್ತನಂತಿಟ್ಟ ಜಿಲ್ಲೆಯ ಪುಲ್ಲಾಡ್‌ನಲ್ಲಿರುವ ರಂಜಿತಾ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಇಬ್ಬರು ಮಕ್ಕಳು ಮತ್ತು ದುಃಖಿತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com