ಮಧ್ಯಪ್ರದೇಶ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ನಕ್ಸಲೀಯರ ಹತ್ಯೆ!

ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್‌ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ
The encounter took place in the forested areas of Pachmadar and Katejhiriya
ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಎನ್ ಕೌಂಟರ್ ನಡೆದಿದೆ
Updated on

ಬಾಲಘಾಟ್: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆಯಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಬಾಲಾಘಾಟ್ ನಕ್ಸಲ್ ಪೀಡಿತ ಜಿಲ್ಲೆಯಾಗಿದ್ದು, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಎನ್ ಕೌಂಟರ್ ನಡೆದ ಸ್ಥಳದಿಂದ ಒಂದು ಗ್ರೆನೇಡ್ ಲಾಂಚರ್, ಸ್ವಯಂ-ಲೋಡಿಂಗ್ ರೈಫಲ್, ಎರಡು 315 ಬೋರ್ ರೈಫಲ್‌ಗಳು ಮತ್ತಿತರ ಶಸ್ತ್ರಾಸ್ತ್ರಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಪಚ್ಮರ್ಹಿಯಲ್ಲಿ ಬಿಜೆಪಿ ತರಬೇತಿ ಶಿಬಿರ ಉದ್ಘಾಟಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಈ ಎನ್ ಕೌಂಟರ್ ನಡೆದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿಎಂ ಮೋಹನ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾರ್ಚ್ 2026 ರ ವೇಳೆಗೆ ನಕ್ಸಲಿಸಂ ಮುಕ್ತ ಅಭಿಯಾನದಲ್ಲಿ ರಾಜ್ಯ ಪ್ರಮುಖ ಯಶಸ್ಸನ್ನು ಸಾಧಿಸಿದೆ ಎಂದು ಬರೆದುಕೊಂಡಿದ್ದಾರೆ.

ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಮಧ್ಯ ಪ್ರದೇಶದ ನಕ್ಸಲ್ ನಿಗ್ರಹ ಪಡೆ, ಜಿಲ್ಲಾ ಪೊಲೀಸ್ ಪಡೆ, ಸಿಆರ್ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ಮಹಿಳೆ ಹಾಗೂ ಮೂವರು ಮಹಿಳಾ ನಕ್ಸಲೀಯರು ಹತ್ಯೆಯಾಗಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

The encounter took place in the forested areas of Pachmadar and Katejhiriya
Encounter: ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್‌, ಇಬ್ಬರು ನಕ್ಸಲೀಯರ ಹತ್ಯೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com