ತೆಲಂಗಾಣ: ಗೋದಾವರಿ ನದಿಯಲ್ಲಿ ಮುಳುಗಿ ಹದಿಹರೆಯದ ಐವರು ಯುವಕರ ಸಾವು!

ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Godavari river
ಗೋದಾವರಿ ನದಿ
Updated on

ತೆಲಂಗಾಣ: ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕರೀಂ ನಗರದ ಬಸರಾ ಬಳಿ ಭಾನುವಾರ ನಡೆದಿದೆ.

ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಾಲಯಕ್ಕೆ ತೆರಳುವ ಮುನ್ನಾ ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಪವಿತ್ರ ಸ್ನಾನ ಮಾಡುವಾಗ ಇದ್ದಕ್ಕಿಂತ ನೀರಿನ ಮಟ್ಟದಲ್ಲಿ ಹೆಚ್ಚಾಗಿದ್ದು, ಆ ಯುವಕರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಭೈಂಸಾದ ಸಹಾಯಕ ಪೊಲೀಸ್ ಅಧೀಕ್ಷಕ ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ನಂತರ ರಕ್ಷಣಾ ತಂಡಗಳು ಐವರನ್ನು ಹೊರತೆಗೆದು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಆಗಮಿಸುವ ಮುನ್ನವೇ ಐವರೂ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

Godavari river
ಉಡುಪಿ: ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ವೇಳೆ ಸಹ ಕಲಾವಿದ ನೀರಿನಲ್ಲಿ ಮುಳುಗಿ ಸಾವು!

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಧಿಕಾರಿಗಳು ಅಧಿಕೃತ ವರದಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com