ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ, ಜಾತ್ಯತೀತ' ಪದ ತೆಗೆದುಹಾಕಲು RSS ಮುಖಂಡ ದತ್ತಾತ್ರೇಯ ಹೊಸಬಾಳೆ ಒತ್ತಾಯ! VIDEO

ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
Dattatreya Hosabale
ದತ್ತಾತ್ರೇಯ ಹೊಸಬಾಳೆ
Updated on

ನವದೆಹಲಿ: ಸಂವಿಧಾನದ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು RSS ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಯೋಜಿಸಿದ್ದ 'ತುರ್ತು ಪರಿಸ್ಥಿತಿಗೆ 50 ವರ್ಷ' ಕಾರ್ಯಕ್ರಮದಲ್ಲಿ ಮಾತನಾಡಿದ ದತ್ತಾತ್ರೇಯ ಹೊಸಬಾಳೆ, "ತುರ್ತು ಪರಿಸ್ಥಿತಿಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾತ್ಯತೀತ ಮತ್ತು ಸಮಾಜವಾದ ಎಂಬ ಎರಡು ಪದಗಳನ್ನು ಸಂವಿಧಾನಕ್ಕೆ ಸೇರಿಸಲಾಯಿತು. ಅವು ಮೂಲ ಪೀಠಿಕೆಯ ಭಾಗವಾಗಿರಲಿಲ್ಲ. ಈಗ ಈ ಪದಗಳು ಪೀಠಿಕೆಯಲ್ಲಿ ಇರಬೇಕೆ ಎಂದು ಪ್ರಶ್ನಿಸಿದರು.

ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಇಂತಹ ಕೆಲಸ ಮಾಡಿದವರು ಇಂದು ಸಂವಿಧಾನದ ಪ್ರತಿ ಹಿಡಿದು ತಿರುಗುತ್ತಿದ್ದಾರೆ. ಅವರು ಇನ್ನೂ ಕ್ಷಮೆ ಕೇಳಿಲ್ಲ, ನಿಮ್ಮ ಪೂರ್ವಜರು ಅದನ್ನು ಮಾಡಿದ್ದಾರೆ, ಇದಕ್ಕಾಗಿ ನೀವು ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದರು.

"ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾವಿರಾರು ಜನರನ್ನು ಜೈಲಿಗೆ ಹಾಕಿ ಕಿರುಕುಳ ನೀಡಲಾಗಿತ್ತು. ನ್ಯಾಯಾಂಗ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಗಿತ್ತು. ಒತ್ತಾಯಪೂರ್ವಕವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು ಎಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಕಿಡಿಕಾರಿದರು.

Dattatreya Hosabale
ತುರ್ತು ಪರಿಸ್ಥಿತಿ ವಿರೋಧಿ ಚಳವಳಿ ನನಗೆ ಕಲಿಕೆಯ ಅನುಭವವಾಗಿತ್ತು: ಪ್ರಧಾನಿ ಮೋದಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com